ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ… ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ನಿತ್ಯ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇಂದು ನಗರದ ರೈಲ್ವೆ ನಿಲ್ದಾಣ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಏಪ್ರಿಲ್ 26 ರಂದು ಪ್ರವಾಸ ಕೈಗೊಳ್ಳದೆ ತಪ್ಪದೆ ಮತದಾನ ಮಾಡುವಂತೆ ತಿಳಿಸಿದೆ.
ಹೆಚ್ಚು ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ತಮ್ಮ ತಮ್ಮ ಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಹಿರಿಯರು, ಕಾಲೇಜು ಯುವಕ- ಯುವತಿಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಸಮೃದ್ಧ ಮತ್ತು ಸದೃಢ ದೇಶ ಕಟ್ಟಲು ಪ್ರತಿಯೊಬ್ಬರ ಮತವು ಅತ್ಯಮೂಲ್ಯ ಎಂಬುದನ್ನು ಮನದಟ್ಟು ಮಾಡಲಾಯಿತು.
ಇನ್ನೊಂದೆಡೆ ರೈಲು ನಿಲ್ದಾಣದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಜಾಗೃತ ಹಾಡು, ಘೋಷವಾಕ್ಯಗಳನ್ನು ಕೇಳಿಸಿ, ಮತದಾನ ದಿನ ರಜೆ ಎಂದು ಭಾವಿಸದೆ ಮತ ಹಾಕುವ ಮೂಲಕ ಚುನಾವಣಾ ಹಬ್ಬವನ್ನು ಆಚರಿಸುವಂತೆ ಕರೆ ನೀಡಲಾಯಿತು.
ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಬಸವರಾಜು, ರವಿ ಹಾಗೂ ಕಾವ್ಯ ಸೇರಿ ಇತರೆ ಸಿಬ್ಬಂದಿ ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…