ಮೈಸೂರು : ನಗರದ ಹಳೆ ಕೆಸರೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿಯನ್ನು ಡಿ.15ರೊಳಗೆ ಸಂಪೂರ್ಣಗೊಳಿಸುವಂತೆ ಶಾಸಕ ಎಸ್.ಎ.ರಾಮದಾಸ್ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಮಂಗಳವಾರ ಮಹಾಪೌರ ಶಿವಕುಮಾರ್ ಮತ್ತು ಉಪ ಮಹಾಪೌರ ಡಾ.ಡಿ.ರೂಪ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ತೆರಳಿ ಕಾಮಗಾರಿ ವಿಳಂಬ ಆಗಿರುವುದಕ್ಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಇದೇ ವೇಳೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಇನ್ನೂ ವಿದ್ಯುತ್ ಸಂಪರ್ಕ ನೀಡಿಲ್ಲದ ಕಾರಣ ಸ್ಥಳದಿಂದಲೇ ಸೆಸ್ಕ್ ಅಧಿಕಾರಿಗಳನ್ನು ಸಂಪರ್ಕಿಸಿ ಕೂಡಲೇ ಟಿಸಿ ಅಳವಡಿಸಿ ವಿದ್ಯುತ್ ಸಂಪರ್ಕ ನೀಡುವಂತೆ ಆದೇಶಿಸಿದರು. ಜತೆಗೆ ತ್ಯಾಜ್ಯ ವಿಲೇವಾರಿ ಘಟಕದ ಅಪೂರ್ಣ ಕಾಮಗಾರಿಗಳನ್ನು ನವೆಂಬರ್ 30 ರೊಳಗೆ ಪೂರೈಸಬೇಕು ಹಾಗೂ ಟ್ರಯಲ್ ನೀಡಬೇಕೆಂದು ತಾಕೀತು ಮಾಡಿದರು.
200 ಟನ್ ಕಸ ಸಂಗ್ರಹಣ ಮಾಡುವ ಸಾಮರ್ಥ್ಯದ ವಿಶೇಷ ಕ್ಲಿನಿಸಿಟಿ ಆಲೋಚನೆಯನ್ನು 2014ರಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಯಿತು. 2015ರಲ್ಲಿ 2ನೇ ಬಾರಿಗೆ ಶೂನ್ಯ ವಿಲೇವಾರಿ ತ್ಯಾಜ್ಯ ಘಟಕ ವನ್ನು ರಾಜ್ಯದಲ್ಲೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಲಾಯಿತು. ನಗರದ 18 ಕಡೆಗಳಲ್ಲಿ ಹಸಿ ಹಾಗೂ ಒಣ ಕಸ ವಿಂಗಡಿಸಲು ಹೊಸ ತಂತ್ರಜ್ಞಾನ ಅಳವಡಿಸಲು ಚಾಲನೆ ನೀಡಲಾಗಿತ್ತು. ರಾಯನ ಕೆರೆ ಹಾಗೂ ಕೆಸರೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ನೂತನ ತಂತ್ರಜ್ಞಾನ ಅಳವಡಿಕೆ ಸಂಪೂರ್ಣವಾದರೆ ಸುಯೇಜ್ ಫಾರಂನಲ್ಲಿರುವ 7ಟನ್ ಕಸಕ್ಕೂ ಮುಕ್ತಿ ಸಿಗಲಿದೆ. ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸದಿಂದ ಆದಾಯವೂ ಹೆಚ್ಚಾಗಿ ಪಾಲಿಕೆಗೆ ಹೆಚ್ಚುವರಿ ಹೊರೆಯೂ ಕಡಿಮೆಯಾಗಲಿದೆ ಈ ನಿಟ್ಟಿನಲ್ಲಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಶಾಸಕರು ಸೂಚಿಸಿದರು.
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ…
ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…
ಟೆಹ್ರಾರ್ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…
ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…
ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…