ಮೈಸೂರು

ಸ್ಮಿತಾರ ಕೊಳಲು ವಾದನಕ್ಕೆ ದಕ್ಕಿದ ಹಿರಿಮೆ

ಮೈಸೂರು : ಜಾಗತಿಕ ಮಟ್ಟದಲ್ಲಿ ಭಾರತದ ಮಹತ್ವವನ್ನು ಸಾರಿದ ಜಿ-20 ಶೃಂಗಸಭೆಯು ಸಾಂಸ್ಕೃತಿಕ ನಗರಿ ಮೈಸೂರಿನ ಮಹಿಳಾ ಕಲಾವಿದರೊಬ್ಬರ ಬದುಕಿಗೂ ಸಾರ್ಥಕತೆಯನ್ನು ಕಲ್ಪಿಸಿದೆ. ವಿದೇಶಗಳ ಗಣ್ಯ ಮಹೋದಯರೆದುರು ಅವರ ಸಂಗೀತ ಸಾಧನೆ ಅನಾವರಣಗೊಂಡಿತು.

ನಗರದ ಸರಸ್ವತಿಪುರಂ ನಿವಾಸಿಯಾಗಿರುವ ಮೈಸೂರು ಆಕಾಶವಾಣಿ ಪ್ರಥಮ ಶ್ರೇಣಿ ಕಲಾವಿದ (ಕೊಳಲು)ರಾದ ಸ್ಮಿತಾ ಶ್ರೀಕಿರಣ್ ಅವರೇ ಇಂತಹ ಅಪೂರ್ವ ಅವಕಾಶ ಪಡೆದವರು. ಸೆ.9 ಮತ್ತು 10ರಂದು ನಡೆದ ಶೃಂಗಸಭೆಯ ಮೊದಲ ದಿನ ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿರುವ ಅಂತಾರಾಷ್ಟ್ರೀಯ ಮತ್ತು ಕನ್ವೆಷನ್ ಸೆಂಟರ್‌ನ ಭಾರತ್ ಮಂಟಪಮ್‌ನಲ್ಲಿ ದೇಶ ಎಲ್ಲ ರಾಜ್ಯಗಳಿಂದ 78 ಮಂದಿ ಒಟ್ಟಾಗಿ ಸಂಗೀತವನ್ನು ಸಾದರಪಡಿಸಿದರು.

ರಾಷ್ಟ್ರೀಯ ಸಂಗೀತ-ನಾಟಕ ಅಕಾಡೆಮಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಮೆರಿಕ, ಜಪಾನ್, ಶ್ರೀಲಂಕಾ, ಜರ್ಮನಿ, ರಷ್ಯಾ ಮುಂತಾದ ಪ್ರತಿಷ್ಠಿತ ದೇಶಗಳ ನೇತಾರರ ಎದುರು ಸುವಾರು 3 ಗಂಟೆಗಳ ಕಾಲ ಈ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿಯೊಂದು ರಾಜ್ಯದವರು ಅವರವರ ಸಂಗೀತ ಕಲೆಯನ್ನು ಸಾಕ್ಷೀಕರಿಸಿದರು. ಸ್ಮಿತಾ ಅವರು ಪುರಂದರ ದಾಸರ ಭಾಗ್ಯದ ಲಕ್ಷ್ಮೀ ಬಾರಮ್ಮ ಕೀರ್ತನೆಯನ್ನು ಕೊಳಲಿನಲ್ಲಿ ನುಡಿಸುವ ಮೂಲಕ ಶ್ರೋತೃಗಳು ತಲೆದೂಗುವಂತೆ ಮಾಡಿದರು.

“ಆಂದೋಲನ”ದೊಂದಿಗೆ ವಾತನಾಡಿದ ಸ್ಮಿತಾ ಅವರು, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನ್ನನ್ನು ಆಕಾಶವಾಣಿ ಮೂಲಕ ಗುರುತಿಸಿ ಆಹ್ವಾನ ನೀಡಲಾಗಿತ್ತು. ಆ.30ರಂದು ಹೊಸದಿಲ್ಲಿಗೆ ತೆರಳಿದೆ. ಸೆ.8ರವರೆಗೂ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ತಾಲೀಮು ನಡೆಯುತ್ತಿತ್ತು. ಅದು ನನ್ನ ಅಪೂರ್ವ ಅನುಭವ ಆಗಿತ್ತು ಎಂದು ಭಾವುಕರಾಗಿ ನುಡಿದರು.

ಜಿ-20 ಶೃಂಗಸಭೆ ಆರಂಭದ ದಿನ ನಡೆದ ಸಂಗೀತ ಕಾರ್ಯಕ್ರಮದಲ್ಲಿ ದೇಶ ವಿದೇಶಗಳ ಗಣ್ಯರು, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಮತ್ತಿತರ ಕೇಂದ್ರ ಸರ್ಕಾರದ ಸಚಿವರು ಪಾಲ್ಗೊಂಡಿದ್ದಲ್ಲದೆ, ಕೊನೆಯ ಅರ್ಧ ಗಂಟೆ ಇರುವಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮಿಸಿದ್ದು, ಅವರಿಗಾಗಿ ಇಡೀ ತಂಡ ವಿಶೇಷ ಸಂಗೀತ ಸಾದರಪಡಿಸಿದ್ದು, ನನ್ನ ಪಾಲಿಗೆ ಅವಿಸ್ಮರಣೀಯ
– ಸ್ಮಿತಾ ಶ್ರೀಕಿರಣ್, ಕೊಳಲು ವಾದಕರು.

 

lokesh

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

15 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago