ಮೈಸೂರು

ಸ್ಮಿತಾರ ಕೊಳಲು ವಾದನಕ್ಕೆ ದಕ್ಕಿದ ಹಿರಿಮೆ

ಮೈಸೂರು : ಜಾಗತಿಕ ಮಟ್ಟದಲ್ಲಿ ಭಾರತದ ಮಹತ್ವವನ್ನು ಸಾರಿದ ಜಿ-20 ಶೃಂಗಸಭೆಯು ಸಾಂಸ್ಕೃತಿಕ ನಗರಿ ಮೈಸೂರಿನ ಮಹಿಳಾ ಕಲಾವಿದರೊಬ್ಬರ ಬದುಕಿಗೂ ಸಾರ್ಥಕತೆಯನ್ನು ಕಲ್ಪಿಸಿದೆ. ವಿದೇಶಗಳ ಗಣ್ಯ ಮಹೋದಯರೆದುರು ಅವರ ಸಂಗೀತ ಸಾಧನೆ ಅನಾವರಣಗೊಂಡಿತು.

ನಗರದ ಸರಸ್ವತಿಪುರಂ ನಿವಾಸಿಯಾಗಿರುವ ಮೈಸೂರು ಆಕಾಶವಾಣಿ ಪ್ರಥಮ ಶ್ರೇಣಿ ಕಲಾವಿದ (ಕೊಳಲು)ರಾದ ಸ್ಮಿತಾ ಶ್ರೀಕಿರಣ್ ಅವರೇ ಇಂತಹ ಅಪೂರ್ವ ಅವಕಾಶ ಪಡೆದವರು. ಸೆ.9 ಮತ್ತು 10ರಂದು ನಡೆದ ಶೃಂಗಸಭೆಯ ಮೊದಲ ದಿನ ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿರುವ ಅಂತಾರಾಷ್ಟ್ರೀಯ ಮತ್ತು ಕನ್ವೆಷನ್ ಸೆಂಟರ್‌ನ ಭಾರತ್ ಮಂಟಪಮ್‌ನಲ್ಲಿ ದೇಶ ಎಲ್ಲ ರಾಜ್ಯಗಳಿಂದ 78 ಮಂದಿ ಒಟ್ಟಾಗಿ ಸಂಗೀತವನ್ನು ಸಾದರಪಡಿಸಿದರು.

ರಾಷ್ಟ್ರೀಯ ಸಂಗೀತ-ನಾಟಕ ಅಕಾಡೆಮಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಮೆರಿಕ, ಜಪಾನ್, ಶ್ರೀಲಂಕಾ, ಜರ್ಮನಿ, ರಷ್ಯಾ ಮುಂತಾದ ಪ್ರತಿಷ್ಠಿತ ದೇಶಗಳ ನೇತಾರರ ಎದುರು ಸುವಾರು 3 ಗಂಟೆಗಳ ಕಾಲ ಈ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿಯೊಂದು ರಾಜ್ಯದವರು ಅವರವರ ಸಂಗೀತ ಕಲೆಯನ್ನು ಸಾಕ್ಷೀಕರಿಸಿದರು. ಸ್ಮಿತಾ ಅವರು ಪುರಂದರ ದಾಸರ ಭಾಗ್ಯದ ಲಕ್ಷ್ಮೀ ಬಾರಮ್ಮ ಕೀರ್ತನೆಯನ್ನು ಕೊಳಲಿನಲ್ಲಿ ನುಡಿಸುವ ಮೂಲಕ ಶ್ರೋತೃಗಳು ತಲೆದೂಗುವಂತೆ ಮಾಡಿದರು.

“ಆಂದೋಲನ”ದೊಂದಿಗೆ ವಾತನಾಡಿದ ಸ್ಮಿತಾ ಅವರು, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನ್ನನ್ನು ಆಕಾಶವಾಣಿ ಮೂಲಕ ಗುರುತಿಸಿ ಆಹ್ವಾನ ನೀಡಲಾಗಿತ್ತು. ಆ.30ರಂದು ಹೊಸದಿಲ್ಲಿಗೆ ತೆರಳಿದೆ. ಸೆ.8ರವರೆಗೂ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ತಾಲೀಮು ನಡೆಯುತ್ತಿತ್ತು. ಅದು ನನ್ನ ಅಪೂರ್ವ ಅನುಭವ ಆಗಿತ್ತು ಎಂದು ಭಾವುಕರಾಗಿ ನುಡಿದರು.

ಜಿ-20 ಶೃಂಗಸಭೆ ಆರಂಭದ ದಿನ ನಡೆದ ಸಂಗೀತ ಕಾರ್ಯಕ್ರಮದಲ್ಲಿ ದೇಶ ವಿದೇಶಗಳ ಗಣ್ಯರು, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಮತ್ತಿತರ ಕೇಂದ್ರ ಸರ್ಕಾರದ ಸಚಿವರು ಪಾಲ್ಗೊಂಡಿದ್ದಲ್ಲದೆ, ಕೊನೆಯ ಅರ್ಧ ಗಂಟೆ ಇರುವಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮಿಸಿದ್ದು, ಅವರಿಗಾಗಿ ಇಡೀ ತಂಡ ವಿಶೇಷ ಸಂಗೀತ ಸಾದರಪಡಿಸಿದ್ದು, ನನ್ನ ಪಾಲಿಗೆ ಅವಿಸ್ಮರಣೀಯ
– ಸ್ಮಿತಾ ಶ್ರೀಕಿರಣ್, ಕೊಳಲು ವಾದಕರು.

 

lokesh

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

2 hours ago