ಮೈಸೂರು

ಸ್ಮಿತಾರ ಕೊಳಲು ವಾದನಕ್ಕೆ ದಕ್ಕಿದ ಹಿರಿಮೆ

ಮೈಸೂರು : ಜಾಗತಿಕ ಮಟ್ಟದಲ್ಲಿ ಭಾರತದ ಮಹತ್ವವನ್ನು ಸಾರಿದ ಜಿ-20 ಶೃಂಗಸಭೆಯು ಸಾಂಸ್ಕೃತಿಕ ನಗರಿ ಮೈಸೂರಿನ ಮಹಿಳಾ ಕಲಾವಿದರೊಬ್ಬರ ಬದುಕಿಗೂ ಸಾರ್ಥಕತೆಯನ್ನು ಕಲ್ಪಿಸಿದೆ. ವಿದೇಶಗಳ ಗಣ್ಯ ಮಹೋದಯರೆದುರು ಅವರ ಸಂಗೀತ ಸಾಧನೆ ಅನಾವರಣಗೊಂಡಿತು.

ನಗರದ ಸರಸ್ವತಿಪುರಂ ನಿವಾಸಿಯಾಗಿರುವ ಮೈಸೂರು ಆಕಾಶವಾಣಿ ಪ್ರಥಮ ಶ್ರೇಣಿ ಕಲಾವಿದ (ಕೊಳಲು)ರಾದ ಸ್ಮಿತಾ ಶ್ರೀಕಿರಣ್ ಅವರೇ ಇಂತಹ ಅಪೂರ್ವ ಅವಕಾಶ ಪಡೆದವರು. ಸೆ.9 ಮತ್ತು 10ರಂದು ನಡೆದ ಶೃಂಗಸಭೆಯ ಮೊದಲ ದಿನ ಹೊಸದಿಲ್ಲಿಯ ಪ್ರಗತಿ ಮೈದಾನದಲ್ಲಿರುವ ಅಂತಾರಾಷ್ಟ್ರೀಯ ಮತ್ತು ಕನ್ವೆಷನ್ ಸೆಂಟರ್‌ನ ಭಾರತ್ ಮಂಟಪಮ್‌ನಲ್ಲಿ ದೇಶ ಎಲ್ಲ ರಾಜ್ಯಗಳಿಂದ 78 ಮಂದಿ ಒಟ್ಟಾಗಿ ಸಂಗೀತವನ್ನು ಸಾದರಪಡಿಸಿದರು.

ರಾಷ್ಟ್ರೀಯ ಸಂಗೀತ-ನಾಟಕ ಅಕಾಡೆಮಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಅಮೆರಿಕ, ಜಪಾನ್, ಶ್ರೀಲಂಕಾ, ಜರ್ಮನಿ, ರಷ್ಯಾ ಮುಂತಾದ ಪ್ರತಿಷ್ಠಿತ ದೇಶಗಳ ನೇತಾರರ ಎದುರು ಸುವಾರು 3 ಗಂಟೆಗಳ ಕಾಲ ಈ ಸಂಗೀತ ಕಾರ್ಯಕ್ರಮ ನಡೆಯಿತು. ಪ್ರತಿಯೊಂದು ರಾಜ್ಯದವರು ಅವರವರ ಸಂಗೀತ ಕಲೆಯನ್ನು ಸಾಕ್ಷೀಕರಿಸಿದರು. ಸ್ಮಿತಾ ಅವರು ಪುರಂದರ ದಾಸರ ಭಾಗ್ಯದ ಲಕ್ಷ್ಮೀ ಬಾರಮ್ಮ ಕೀರ್ತನೆಯನ್ನು ಕೊಳಲಿನಲ್ಲಿ ನುಡಿಸುವ ಮೂಲಕ ಶ್ರೋತೃಗಳು ತಲೆದೂಗುವಂತೆ ಮಾಡಿದರು.

“ಆಂದೋಲನ”ದೊಂದಿಗೆ ವಾತನಾಡಿದ ಸ್ಮಿತಾ ಅವರು, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನನ್ನನ್ನು ಆಕಾಶವಾಣಿ ಮೂಲಕ ಗುರುತಿಸಿ ಆಹ್ವಾನ ನೀಡಲಾಗಿತ್ತು. ಆ.30ರಂದು ಹೊಸದಿಲ್ಲಿಗೆ ತೆರಳಿದೆ. ಸೆ.8ರವರೆಗೂ ಪ್ರತಿದಿನ ಬೆಳಿಗ್ಗೆ 10ರಿಂದ ರಾತ್ರಿ 10ರವರೆಗೆ ತಾಲೀಮು ನಡೆಯುತ್ತಿತ್ತು. ಅದು ನನ್ನ ಅಪೂರ್ವ ಅನುಭವ ಆಗಿತ್ತು ಎಂದು ಭಾವುಕರಾಗಿ ನುಡಿದರು.

ಜಿ-20 ಶೃಂಗಸಭೆ ಆರಂಭದ ದಿನ ನಡೆದ ಸಂಗೀತ ಕಾರ್ಯಕ್ರಮದಲ್ಲಿ ದೇಶ ವಿದೇಶಗಳ ಗಣ್ಯರು, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಮತ್ತಿತರ ಕೇಂದ್ರ ಸರ್ಕಾರದ ಸಚಿವರು ಪಾಲ್ಗೊಂಡಿದ್ದಲ್ಲದೆ, ಕೊನೆಯ ಅರ್ಧ ಗಂಟೆ ಇರುವಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಆಗಮಿಸಿದ್ದು, ಅವರಿಗಾಗಿ ಇಡೀ ತಂಡ ವಿಶೇಷ ಸಂಗೀತ ಸಾದರಪಡಿಸಿದ್ದು, ನನ್ನ ಪಾಲಿಗೆ ಅವಿಸ್ಮರಣೀಯ
– ಸ್ಮಿತಾ ಶ್ರೀಕಿರಣ್, ಕೊಳಲು ವಾದಕರು.

 

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago