ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ ಸದಸ್ಯರಾದ ದಾಸಯ್ಯ ಸಲಹೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಯಲ್ಲಿ ಬರುವ ಉಪ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗದ ಬಗ್ಗೆ ಖಚಿತವಾದ ಅಂಕಿ ಅಂಶಗಳನ್ನೊಳಗೊಂಡ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ನ್ಯಾಯಯುತ ವರ್ಗೀಕರಣ ಮಾಡಬೇಕು, ವರ್ಗೀಕರಣವು ನ್ಯಾಯಯುತವಾದ, ಅಗತ್ಯವಾದ, ಪೂರ್ಣ ಅಂಕಿ ಅಂಶಗಳನ್ನು ಒಳಗೊಂಡಿರಬೇಕೆಂದು ತಿಳಿಸಿದೆ. ಹೀಗಾಗಿ ಇದನ್ನು ಪಾಲನೆ ಮಾಡಬೇಕು. ಈಚೆಗೆ ಜನಗಣತಿ ನಡೆದಿಲ್ಲ. ಈಗ ರಾಜ್ಯ ಸರ್ಕಾರ ಪಡೆದಿರುವ ಜಾತಿಗಣತಿ ವರದಿ ಸಹಾ ಪೂರ್ಣ ಮಾಹಿತಿ ಒಳಗೊಂಡಿಲ್ಲ. ಹೀಗಾಗಿ ಗ್ರಾಮ ಲೆಕ್ಕಿಗರು, ಮೊದಲಾದವರನ್ನು ಬಳಸಿಕೊಂಡು, ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೂಡಲೇ ರಾಜ್ಯದಾದ್ಯಂತ ಈ ರೀತಿಯ ಅಂಕಿ ಅಂಶ ಸಂಗ್ರಹಿಸಬೇಕು ಎಂದು ಸಲಹೆ ನೀಡಿದರು.
ಜೊತೆಗೆ, ಕೇಂದ್ರ ಸರ್ಕಾರ ಸದ್ಯದಲ್ಲಿಯೇ 2021 ರ ಜನಗಣತಿ ನಡೆಸುವ ಸಾಧ್ಯತೆ ಇರುವುರಿಂದ ಈ ಜಾತಿಗಳ ಜನಸಂಖ್ಯೆ, ಅವರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಮೂಲಕ ಸುಪ್ರೀಂಕೋರ್ಟಿನ ತಿರ್ಪಿನಲ್ಲಿ ನೀಡಿರುವ ಮಾನದಂಡ ಪಾಲಿಸಲು ಸಾಧ್ಯವಾಗಬಹುದಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿಯೊಂದನ್ನು ಸಲ್ಲಿಸಬೇಕು ಎಂದರು.
ಸಿಂಧುವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಉಮಾಪತಿ ಹಾಗೂ ದಾಸಯ್ಯ ಅವರ ಇನ್ನಿತರ ವಕೀಲ ಮಿತ್ರರು ಹಾಜರಿದ್ದರು.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…