ಮೈಸೂರು

ಸೋಷಿಯಲ್‌ ಮೀಡಿಯಾ ಪೋಸ್ಟ್‌ : ಮೈಸೂರು ನಗರ ಉದ್ವಿಗ್ನ

ಮೈಸೂರು: ವ್ಯಕ್ತಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದಾಗಿ ಮೈಸೂರು ನಗರ ಉದ್ವಿಗ್ನಗೊಂಡಿದೆ.

ನಗರದ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರಗಳನ್ನು ವಿವಸ್ತ್ರಗೊಳಿಸಿ, ತಲೆ ಮೇಲೆ ಮುಸ್ಲಿಂ ಸಮುದಾಯ ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದಗಳನ್ನು ಬರೆದು ಸಾರ್ವಜನಿಕವಾಗಿ ಹಂಚಿಕೆ ಮಾಡಿರುವುದೇ ಮುಸ್ಲಿಂ ಸಮುದಾಯ ಉದ್ವಿಗ್ನಗೊಳ್ಳಲು ಕಾರಣವಾಗಿದೆ.

ಪೋಸ್ಟರ್ ಕುರಿತು ಸೋಮವಾರ ರಾತ್ರಿ ಮಾಹಿತಿ ತಿಳಿದ ಮುಸ್ಲಿಂ ಸಮುದಾಯದ ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತೆಡೆದು‌ ಪ್ರತಿಭಟನೆಗೆ ಮುಂದಾದರು. ಈ ವೇಳೆ ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿತಲ್ಲದೆ, ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಕೂಡಲೇ ಹೆಚ್ಚುವರಿ ಪಡೆ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.

ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಕಂಡ ಪೊಲೀಸರು ಕೂಡಲೇ ಲಾಠಿ ಪ್ರಹಾರ ಮಾಡಿದರಲ್ಲದೆ, ಆಶ್ರುವಾಯು ಸಿಡಿಸಿ ಗುಂಪುಗೂಡಿದವರನ್ನು ಚದುರಿಸಿದರು.

ತದನಂತರ ಒಂದು ಸಮುದಾಯದ ಗುಂಪಿನ ಪ್ರಮುಖರು ತಮ್ಮ ಜನರನ್ನು ಸಂತೈಸುವ ನಿಟ್ಟಿನಲ್ಲಿ ಕೆಲಸ ಮಾಡಿದರಾದರೂ ಪ್ರತಿಭಟನೆ ಮತ್ತಷ್ಟು ತಾರಕಕ್ಕೇರಿತು. ಈ ವೇಳೆ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಆಕ್ರೋಶಭರಿತ ಗುಂಪನ್ನು ಚದುರಿಸಲಾಯಿತು.

ಸದ್ಯ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಉನ್ನತಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಂಬತ್ತರ ದಶಕದ ಮೈಸೂರಿನ ಜೆನ್ ಝೀಗಳು

ಎಸ್.ಗಂಗಾಧರಯ್ಯ ಕಾಲೇಜು ಹಾಗೂ ಯೂನಿ ವರ್ಸಿಟಿಗಳೇ ಚಳವಳಿಗಳ ತಾಲೀಮು ರಂಗವಾಗಿದ್ದ ಕಾಲವೊಂದಿತ್ತು. ಮೇಷ್ಟ್ರುಗಳೂ ವಿದ್ಯಾರ್ಥಿಗಳನ್ನು ಚಳವಳಿಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ಖುದ್ದು…

5 mins ago

ಸಂಕಷ್ಟಕ್ಕೆ ಸಿಲುಕಿದ ಸರ್ಕಾರಕ್ಕೆ ವರದಾನವಾದ ಕಬಿನಿ

ಮಂಜು ಕೋಟೆ ಕಬಿನಿ ಜಲಾಶಯ ಭರ್ತಿ; ೧೦ ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಬರದ ನಡುವೆಯೂ  ಕೇರಳದ…

10 mins ago

ಗಾಂಧಿ ಅಭಿಯಾನ ಅರಿವಿನ ಯಾನ : ತುಂಡು ಬಟ್ಟೆಯ ಫಕೀರ ಮತ್ತು ಇಂಗ್ಲೆಂಡ್ ಚಕ್ರವರ್ತಿ

ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…

20 hours ago

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

22 hours ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

23 hours ago