ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ
ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ ತೆರಳಲು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಈ ದುರಂತ ನಡೆದಿದೆ.
ತಂದೆ ಬಸ್ ಹತ್ತಿದ್ದು ಮಗ ಪ್ರಜ್ವಲ್ ಮುಂಬಾಗಿಲಿನಲ್ಲಿ ಹತ್ತಲು ಹೋದಾಗ ಹಿಂಬಂದಿಯಲ್ಲಿ ಹತ್ತು ಎಂಬ ಧ್ವನಿ ಕೇಳಿದ ಬಾಲಕ ಹಿಂದಿನ ಬಾಗಿಲಿನಲ್ಲಿ ಹತ್ತಲು ಹೊದಾಗ ಚಾಲನೆಗೊಂಡ ಬಸ್ನ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವ ಸಾಗಿಸಲು ವಾಹನವೇ ಇಲ್ಲ: ಅಪಘಾತದಲ್ಲಿ ಸಿಲುಕಿದವರನ್ನು ಕೊಂಡೊಯ್ಯಲು ಅನೇಕ 108 ಆಂಬ್ಯುಲೆನ್ಸ್ ವಾಹನಗಳಿರುವ ನಂಜನಗೂಡಲ್ಲಿ ಶವಸಾಗಿಸಲು ವಾಹನದ ಕೊರತೆ ಇದೆ. ಬಸ್ ನಿಲ್ದಾಣದಲ್ಲಿ ಸಾವಿಗೀಡಾದ ಬಾಲಕನ ಶವ ಸಾಗಿಸಲು ಯಾವುದೇ ವಾಹನ ಬಾರದಿದ್ದಾಗ ಸಂಚಾರ ಠಾಣೆ ಎಸ್ಐ ಯಾಸ್ಮಿನ್ ತಾಜ್, ಆಟೋ ಚಾಲಕ ಪಾಷ ಆಗಮಿಸಿ ಮೃತದೇಹವನ್ನು ಸಾಗಿಸಿದರು.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…