ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ
ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ ತೆರಳಲು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಈ ದುರಂತ ನಡೆದಿದೆ.
ತಂದೆ ಬಸ್ ಹತ್ತಿದ್ದು ಮಗ ಪ್ರಜ್ವಲ್ ಮುಂಬಾಗಿಲಿನಲ್ಲಿ ಹತ್ತಲು ಹೋದಾಗ ಹಿಂಬಂದಿಯಲ್ಲಿ ಹತ್ತು ಎಂಬ ಧ್ವನಿ ಕೇಳಿದ ಬಾಲಕ ಹಿಂದಿನ ಬಾಗಿಲಿನಲ್ಲಿ ಹತ್ತಲು ಹೊದಾಗ ಚಾಲನೆಗೊಂಡ ಬಸ್ನ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವ ಸಾಗಿಸಲು ವಾಹನವೇ ಇಲ್ಲ: ಅಪಘಾತದಲ್ಲಿ ಸಿಲುಕಿದವರನ್ನು ಕೊಂಡೊಯ್ಯಲು ಅನೇಕ 108 ಆಂಬ್ಯುಲೆನ್ಸ್ ವಾಹನಗಳಿರುವ ನಂಜನಗೂಡಲ್ಲಿ ಶವಸಾಗಿಸಲು ವಾಹನದ ಕೊರತೆ ಇದೆ. ಬಸ್ ನಿಲ್ದಾಣದಲ್ಲಿ ಸಾವಿಗೀಡಾದ ಬಾಲಕನ ಶವ ಸಾಗಿಸಲು ಯಾವುದೇ ವಾಹನ ಬಾರದಿದ್ದಾಗ ಸಂಚಾರ ಠಾಣೆ ಎಸ್ಐ ಯಾಸ್ಮಿನ್ ತಾಜ್, ಆಟೋ ಚಾಲಕ ಪಾಷ ಆಗಮಿಸಿ ಮೃತದೇಹವನ್ನು ಸಾಗಿಸಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…