ಮೈಸೂರು

ತಂದೆ ಎದುರೇ ಬಸ್ ಚಕ್ರಕ್ಕೆ ಸಿಲುಕಿ ಮಗನ ಸಾವು

ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ

ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.  ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ ತೆರಳಲು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಈ ದುರಂತ ನಡೆದಿದೆ.

ತಂದೆ ಬಸ್ ಹತ್ತಿದ್ದು ಮಗ ಪ್ರಜ್ವಲ್ ಮುಂಬಾಗಿಲಿನಲ್ಲಿ ಹತ್ತಲು ಹೋದಾಗ ಹಿಂಬಂದಿಯಲ್ಲಿ ಹತ್ತು ಎಂಬ ಧ್ವನಿ ಕೇಳಿದ ಬಾಲಕ ಹಿಂದಿನ ಬಾಗಿಲಿನಲ್ಲಿ ಹತ್ತಲು ಹೊದಾಗ ಚಾಲನೆಗೊಂಡ ಬಸ್‌ನ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಶವ ಸಾಗಿಸಲು ವಾಹನವೇ ಇಲ್ಲ: ಅಪಘಾತದಲ್ಲಿ ಸಿಲುಕಿದವರನ್ನು ಕೊಂಡೊಯ್ಯಲು  ಅನೇಕ 108 ಆಂಬ್ಯುಲೆನ್ಸ್ ವಾಹನಗಳಿರುವ ನಂಜನಗೂಡಲ್ಲಿ ಶವಸಾಗಿಸಲು ವಾಹನದ ಕೊರತೆ ಇದೆ. ಬಸ್ ನಿಲ್ದಾಣದಲ್ಲಿ ಸಾವಿಗೀಡಾದ ಬಾಲಕನ ಶವ ಸಾಗಿಸಲು ಯಾವುದೇ ವಾಹನ ಬಾರದಿದ್ದಾಗ ಸಂಚಾರ ಠಾಣೆ ಎಸ್‌ಐ ಯಾಸ್ಮಿನ್ ತಾಜ್, ಆಟೋ ಚಾಲಕ  ಪಾಷ ಆಗಮಿಸಿ ಮೃತದೇಹವನ್ನು ಸಾಗಿಸಿದರು.

 

 

andolana

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

10 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

10 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

12 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

14 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

14 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

14 hours ago