ನಂಜನಗೂಡು ಬಸ್ ನಿಲ್ದಾಣದಲ್ಲಿ ದಾರುಣ ಘಟನೆ
ನಂಜನಗೂಡು: ತಂದೆ ಎದುರೇ ಮಗ ಬಸ್ ನಿಲ್ದಾಣದಲ್ಲಿ ಬಸ್ ಚಕ್ರಕ್ಕೆ ಸಿಲುಕಿ ಸಾವಿಗೀಡಾದ ದಾರುಣ ಘಟನೆ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ. ನಂಜನಪುರದ ಪ್ರಕಾಶ ಅವರ ಪುತ್ರ ಪ್ರಜ್ವಲ್ (೧೪) ಮೃತಪಟ್ಟ ಬಾಲಕ. ಊರಿಗೆ ತೆರಳಲು ನಗರದ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಈ ದುರಂತ ನಡೆದಿದೆ.
ತಂದೆ ಬಸ್ ಹತ್ತಿದ್ದು ಮಗ ಪ್ರಜ್ವಲ್ ಮುಂಬಾಗಿಲಿನಲ್ಲಿ ಹತ್ತಲು ಹೋದಾಗ ಹಿಂಬಂದಿಯಲ್ಲಿ ಹತ್ತು ಎಂಬ ಧ್ವನಿ ಕೇಳಿದ ಬಾಲಕ ಹಿಂದಿನ ಬಾಗಿಲಿನಲ್ಲಿ ಹತ್ತಲು ಹೊದಾಗ ಚಾಲನೆಗೊಂಡ ಬಸ್ನ ಹಿಂಬದಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶವ ಸಾಗಿಸಲು ವಾಹನವೇ ಇಲ್ಲ: ಅಪಘಾತದಲ್ಲಿ ಸಿಲುಕಿದವರನ್ನು ಕೊಂಡೊಯ್ಯಲು ಅನೇಕ 108 ಆಂಬ್ಯುಲೆನ್ಸ್ ವಾಹನಗಳಿರುವ ನಂಜನಗೂಡಲ್ಲಿ ಶವಸಾಗಿಸಲು ವಾಹನದ ಕೊರತೆ ಇದೆ. ಬಸ್ ನಿಲ್ದಾಣದಲ್ಲಿ ಸಾವಿಗೀಡಾದ ಬಾಲಕನ ಶವ ಸಾಗಿಸಲು ಯಾವುದೇ ವಾಹನ ಬಾರದಿದ್ದಾಗ ಸಂಚಾರ ಠಾಣೆ ಎಸ್ಐ ಯಾಸ್ಮಿನ್ ತಾಜ್, ಆಟೋ ಚಾಲಕ ಪಾಷ ಆಗಮಿಸಿ ಮೃತದೇಹವನ್ನು ಸಾಗಿಸಿದರು.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…