ಮೈಸೂರು

ಎಸ್‌.ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸದ ಸೋನಿಯಾ: ವಿಶ್ವನಾಥ್‌ ಅಸಮಾಧಾನ

ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರವು ಗೌರವಯುತವಾಗಿ ನಡೆದಿದೆ. ಕಾಂಗ್ರೆಸ್‌ ಸರ್ಕಾರ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಹೀಗಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಇದೇ ವೇಳೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಶ್ವಾನಾಥ್‌, ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಸೌಜನ್ಯಕ್ಕೂ ಸಂತಾಪ ಸೂಚಿಸಿಲ್ಲ. ಎಸ್‌.ಎಂ ಕೃಷ್ಣ ಅವರ ಬಗ್ಗೆ ತುಟಿ ಬಿಚ್ಚಿಲಿಲ್ಲ. ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು. ದ್ವೇಷ ಇರಬಾರದು. ಸತ್ತಾಗಲು ದ್ವೇಷ ಮಾಡುವುದು ಸರಿಯಲ್ಲ. ದೇವರಾಜ ಅರಸ್ ಸತ್ತಾಗಲು ಸಹ ಸಂತಾಪ ಸೂಚಿಸಲಿಲ್ಲ. ಪಿವಿ ನರಸಿಂಹರಾವ್ ಸಾವನ್ನಪ್ಪಿದಾಗಲು ಸಂತಾಪ ಸೂಚಿಸಲಿಲ್ಲ. ವಿಪಿ ಸಿಂಗ್ ಹಾಗೂ ಚಂದ್ರಶೇಖರ್ ಸತ್ತಾಗಲು ಸಂತಾಪ ಸೂಚಿಸಲಿಲ್ಲ ಎಂದು ಸೋನಿಯಾ ಗಾಂಧಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಮನುಷ್ಯತ್ವ ಕಳೆದುಕೊಂಡ ಬ್ಯುಸಿನೆಸ್‌ ಇಂಡಸ್ಟ್ರಿ
ಹಲವು ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಗೆ ಹೆಸರು ತಂದವರು ಎಸ್ ಎಂ ಕೃಷ್ಣ ಅವರು. ಇದೀಗ ಅವರ ಸಾವಿನಲ್ಲಿ ರಾಜಕಾರಣ, ಪಕ್ಷ ದ್ವೇಷ ಮುಖ್ಯವಾಗಬಾರದು. ಮೈಸೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಯುತ್ತಿದೆ. ಇದಕ್ಕೆಲ್ಲ ಎಸ್ ಎಂ ಕೃಷ್ಣ ಅವರು ದೂರದೃಷ್ಠಿಯ ಕೈಗಾರಿಕರಣ ಕಾರಣ. ಆದರೆ,ಇನ್ಫೋಸಿಸ್ ಸಂಸ್ಥೆಯಿಂದಲೂ ಒಂದು ಸಂತಾಪ ಸೂಚಿಸಲಿಲ್ಲ. ಬ್ಯುಸಿನೆಸ್ ಇಂಡಸ್ಟ್ರಿ ಮನುಷ್ಯತ್ವ ಕಳೆದುಕೊಂಡಿದೆ ಎಂದು ಬೇಸರಿಸಿದರು.

ರಿಂಗ್‌ ರೋಡ್‌ಗೆ ಎಸ್‌.ಎಂ ಕೃಷ್ಣ ಹೆಸರಿಡಿ
ಮೈಸೂರಿನ ರಿಂಗ್ ರೋಡ್‌ ಅನ್ನು ಎಸ್ ಎಂ ಕೃಷ್ಣ ನಿರ್ಮಾಣ ಮಾಡಿದ್ದು. ರಿಂಗ್ ರೋಡ್ ಗೆ ಅವರ ಹೆಸರಿಡಬೇಕು. ಮೈಸೂರನ್ನು ಹೆರಿಟೇಜ್ ಸಿಟಿ ಮಾಡಿದ್ದು ಎಸ್ ಎಂ ಕೃಷ್ಣ. ಪಾರಂಪರಿಕ ನಗರವನ್ನು ಈಗಿನ ಸರ್ಕಾರ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

3 hours ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

3 hours ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

3 hours ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

3 hours ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

3 hours ago