ಮೈಸೂರು: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.
ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರವು ಗೌರವಯುತವಾಗಿ ನಡೆದಿದೆ. ಕಾಂಗ್ರೆಸ್ ಸರ್ಕಾರ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಹೀಗಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.
ಇದೇ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಶ್ವಾನಾಥ್, ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಸೌಜನ್ಯಕ್ಕೂ ಸಂತಾಪ ಸೂಚಿಸಿಲ್ಲ. ಎಸ್.ಎಂ ಕೃಷ್ಣ ಅವರ ಬಗ್ಗೆ ತುಟಿ ಬಿಚ್ಚಿಲಿಲ್ಲ. ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು. ದ್ವೇಷ ಇರಬಾರದು. ಸತ್ತಾಗಲು ದ್ವೇಷ ಮಾಡುವುದು ಸರಿಯಲ್ಲ. ದೇವರಾಜ ಅರಸ್ ಸತ್ತಾಗಲು ಸಹ ಸಂತಾಪ ಸೂಚಿಸಲಿಲ್ಲ. ಪಿವಿ ನರಸಿಂಹರಾವ್ ಸಾವನ್ನಪ್ಪಿದಾಗಲು ಸಂತಾಪ ಸೂಚಿಸಲಿಲ್ಲ. ವಿಪಿ ಸಿಂಗ್ ಹಾಗೂ ಚಂದ್ರಶೇಖರ್ ಸತ್ತಾಗಲು ಸಂತಾಪ ಸೂಚಿಸಲಿಲ್ಲ ಎಂದು ಸೋನಿಯಾ ಗಾಂಧಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮನುಷ್ಯತ್ವ ಕಳೆದುಕೊಂಡ ಬ್ಯುಸಿನೆಸ್ ಇಂಡಸ್ಟ್ರಿ
ಹಲವು ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಗೆ ಹೆಸರು ತಂದವರು ಎಸ್ ಎಂ ಕೃಷ್ಣ ಅವರು. ಇದೀಗ ಅವರ ಸಾವಿನಲ್ಲಿ ರಾಜಕಾರಣ, ಪಕ್ಷ ದ್ವೇಷ ಮುಖ್ಯವಾಗಬಾರದು. ಮೈಸೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಯುತ್ತಿದೆ. ಇದಕ್ಕೆಲ್ಲ ಎಸ್ ಎಂ ಕೃಷ್ಣ ಅವರು ದೂರದೃಷ್ಠಿಯ ಕೈಗಾರಿಕರಣ ಕಾರಣ. ಆದರೆ,ಇನ್ಫೋಸಿಸ್ ಸಂಸ್ಥೆಯಿಂದಲೂ ಒಂದು ಸಂತಾಪ ಸೂಚಿಸಲಿಲ್ಲ. ಬ್ಯುಸಿನೆಸ್ ಇಂಡಸ್ಟ್ರಿ ಮನುಷ್ಯತ್ವ ಕಳೆದುಕೊಂಡಿದೆ ಎಂದು ಬೇಸರಿಸಿದರು.
ರಿಂಗ್ ರೋಡ್ಗೆ ಎಸ್.ಎಂ ಕೃಷ್ಣ ಹೆಸರಿಡಿ
ಮೈಸೂರಿನ ರಿಂಗ್ ರೋಡ್ ಅನ್ನು ಎಸ್ ಎಂ ಕೃಷ್ಣ ನಿರ್ಮಾಣ ಮಾಡಿದ್ದು. ರಿಂಗ್ ರೋಡ್ ಗೆ ಅವರ ಹೆಸರಿಡಬೇಕು. ಮೈಸೂರನ್ನು ಹೆರಿಟೇಜ್ ಸಿಟಿ ಮಾಡಿದ್ದು ಎಸ್ ಎಂ ಕೃಷ್ಣ. ಪಾರಂಪರಿಕ ನಗರವನ್ನು ಈಗಿನ ಸರ್ಕಾರ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…