ಮೈಸೂರು

ಎಸ್‌.ಎಂ ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸದ ಸೋನಿಯಾ: ವಿಶ್ವನಾಥ್‌ ಅಸಮಾಧಾನ

ಮೈಸೂರು: ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ನಿಧನಕ್ಕೆ ಸೌಜನ್ಯಕ್ಕಾದರೂ ಸಂತಾಪ ಸೂಚಿಸಿಲ್ಲ ಎಂದು ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರವು ಗೌರವಯುತವಾಗಿ ನಡೆದಿದೆ. ಕಾಂಗ್ರೆಸ್‌ ಸರ್ಕಾರ ಎಲ್ಲವನ್ನೂ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಹೀಗಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶ್ಲಾಘಿಸಿದರು.

ಇದೇ ವೇಳೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಶ್ವಾನಾಥ್‌, ರಾಷ್ಟ್ರಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಆದರೆ ಸೋನಿಯಾ ಗಾಂಧಿ ಸೌಜನ್ಯಕ್ಕೂ ಸಂತಾಪ ಸೂಚಿಸಿಲ್ಲ. ಎಸ್‌.ಎಂ ಕೃಷ್ಣ ಅವರ ಬಗ್ಗೆ ತುಟಿ ಬಿಚ್ಚಿಲಿಲ್ಲ. ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು. ದ್ವೇಷ ಇರಬಾರದು. ಸತ್ತಾಗಲು ದ್ವೇಷ ಮಾಡುವುದು ಸರಿಯಲ್ಲ. ದೇವರಾಜ ಅರಸ್ ಸತ್ತಾಗಲು ಸಹ ಸಂತಾಪ ಸೂಚಿಸಲಿಲ್ಲ. ಪಿವಿ ನರಸಿಂಹರಾವ್ ಸಾವನ್ನಪ್ಪಿದಾಗಲು ಸಂತಾಪ ಸೂಚಿಸಲಿಲ್ಲ. ವಿಪಿ ಸಿಂಗ್ ಹಾಗೂ ಚಂದ್ರಶೇಖರ್ ಸತ್ತಾಗಲು ಸಂತಾಪ ಸೂಚಿಸಲಿಲ್ಲ ಎಂದು ಸೋನಿಯಾ ಗಾಂಧಿ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಮನುಷ್ಯತ್ವ ಕಳೆದುಕೊಂಡ ಬ್ಯುಸಿನೆಸ್‌ ಇಂಡಸ್ಟ್ರಿ
ಹಲವು ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಗೆ ಹೆಸರು ತಂದವರು ಎಸ್ ಎಂ ಕೃಷ್ಣ ಅವರು. ಇದೀಗ ಅವರ ಸಾವಿನಲ್ಲಿ ರಾಜಕಾರಣ, ಪಕ್ಷ ದ್ವೇಷ ಮುಖ್ಯವಾಗಬಾರದು. ಮೈಸೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಲ್ಲಿ ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಯುತ್ತಿದೆ. ಇದಕ್ಕೆಲ್ಲ ಎಸ್ ಎಂ ಕೃಷ್ಣ ಅವರು ದೂರದೃಷ್ಠಿಯ ಕೈಗಾರಿಕರಣ ಕಾರಣ. ಆದರೆ,ಇನ್ಫೋಸಿಸ್ ಸಂಸ್ಥೆಯಿಂದಲೂ ಒಂದು ಸಂತಾಪ ಸೂಚಿಸಲಿಲ್ಲ. ಬ್ಯುಸಿನೆಸ್ ಇಂಡಸ್ಟ್ರಿ ಮನುಷ್ಯತ್ವ ಕಳೆದುಕೊಂಡಿದೆ ಎಂದು ಬೇಸರಿಸಿದರು.

ರಿಂಗ್‌ ರೋಡ್‌ಗೆ ಎಸ್‌.ಎಂ ಕೃಷ್ಣ ಹೆಸರಿಡಿ
ಮೈಸೂರಿನ ರಿಂಗ್ ರೋಡ್‌ ಅನ್ನು ಎಸ್ ಎಂ ಕೃಷ್ಣ ನಿರ್ಮಾಣ ಮಾಡಿದ್ದು. ರಿಂಗ್ ರೋಡ್ ಗೆ ಅವರ ಹೆಸರಿಡಬೇಕು. ಮೈಸೂರನ್ನು ಹೆರಿಟೇಜ್ ಸಿಟಿ ಮಾಡಿದ್ದು ಎಸ್ ಎಂ ಕೃಷ್ಣ. ಪಾರಂಪರಿಕ ನಗರವನ್ನು ಈಗಿನ ಸರ್ಕಾರ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

1 hour ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

1 hour ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

1 hour ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

1 hour ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

4 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

4 hours ago