ಮೈಸೂರು

ಬೀಡಾ ಅಂಗಡಿ ಬಿಲ್​ ವಿಚಾರಕ್ಕೆ ಕಿತ್ತಾಡಿಕೊಂಡ ಪ್ರತಿಷ್ಠಿತರ ಮಕ್ಕಳು

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ.

ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ ಮುಂಭಾಗ ಘಟನೆ ನಡೆದಿದೆ.

ಉಟದ ಬಳಿಕ ಬೀಡ ತಿಂದು ಹಣ ನೀಡಲು ಸಾ.ರಾ.ಜಯಂತ್​ ಮುಂದಾಗಿದ್ದು, ಈ ವೇಳೆ ಪತ್ರಕರ್ತರ ಮಗ ಸ್ಕ್ಯಾನರ್​​ಗೆ ಅಡ್ಡ ನಿಂತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಬಡಿದಾಟಕ್ಕೆ ಕಾರಣವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಕುವೆಂಪುನಗರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಇಬ್ಬರನ್ನು ಠಾಣೆಗೆ ಕರೆದೊಯ್ದು, ಬುದ್ದಿವಾದ ಹೇಳಿ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಕಳುಹಿಸಿದ್ಧಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಈ ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡು ಬಂದಿದೆ.

lokesh

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago