ಮೈಸೂರು

ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತೋರಿಸುತ್ತದೆ: ಡಾ. ಕೆ.ವಿ ರಾಜೇಂದ್ರ

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.

ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಧಿಕಾರಿಗಳು ವರ್ಷದ 365 ದಿನಗಳೂ ಕೆಲಸ ಮಾಡುತ್ತಾರೆ. ಹಾಗಾಗಿ ಈ ರೀತಿಯ ಕ್ರೀಡಾಕೂಟವನ್ನು ನಡೆಸುವುದರಿಂದ ಅವರ ಒತ್ತಡಗಳಿಂದ ಹೊರಬಂದು ಉತ್ತಮ ಮನಸ್ಥಿತಿ ಹೊಂದಲು ನೇರವಾಗುತ್ತದೆ ಎಂದರು.

ಚುನಾವಣೆಯ ಸಂದರ್ಭವಾದ್ದರಿಂದ ಬಹಳ ಕಡಿಮೆ ಸಮಯದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಇದರಿಂದ ಚುನಾವಣಾ ಕೆಲಸದಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಹುಮ್ಮಸಿನಿಂದ ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಆನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದು ಎಲ್ಲಾ ಅಧಿಕಾರಿಗಳು ಕೆಲಸದ ಜೊತೆಗೆ ತಮ್ಮ ವಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಬಹಳ ಮುಖ್ಯ. ಪ್ರಸ್ತುತ ಜಿಮ್ ಗೆ ಹೋಗುವವರೇ ಹೆಚ್ಚಾಗಿ ಮರಣ ಹೊಂದುತ್ತಿದ್ದಾರೆ ಎಂಬ ಋಣಾತ್ಮಕ ಮಾಹಿತಿ ಎಲ್ಲೆಡೆ ಹರಡುತ್ತಿದ್ದು, ಆ ಯೋಚನೆಯನ್ನು ಮನಸ್ಸಿನಿಂದ ತೆಗೆದುಹಾಕಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ನಾವೆಲ್ಲರೂ ಒಂದು ತಂಡವಾಗಿ ಯಾವುದೇ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಕ್ರೀಡಾಕೂಟ ಸ್ಫೂರ್ತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ ಗಾಯಿತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

10 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

10 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

14 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

14 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

14 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

15 hours ago