ಮೈಸೂರು

ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತೋರಿಸುತ್ತದೆ: ಡಾ. ಕೆ.ವಿ ರಾಜೇಂದ್ರ

ಮೈಸೂರು: ಅಧಿಕಾರಿಗಳು ತಮ್ಮ ಪ್ರತಿಭೆಗಳನ್ನು ತೋರಿಸಲು ಈ ಕ್ರೀಡಾಕೂಟ ಒಳ್ಳೆಯ ಸಂದರ್ಭ. ಕ್ರೀಡಾ ಸ್ಫೂರ್ತಿ ಎನ್ನುವುದು ನಮ್ಮ ಕೆಲಸದ ವೈಖರಿಯನ್ನು ತಿಳಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಹೇಳಿದರು.

ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮೈಸೂರು ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಧಿಕಾರಿಗಳು ವರ್ಷದ 365 ದಿನಗಳೂ ಕೆಲಸ ಮಾಡುತ್ತಾರೆ. ಹಾಗಾಗಿ ಈ ರೀತಿಯ ಕ್ರೀಡಾಕೂಟವನ್ನು ನಡೆಸುವುದರಿಂದ ಅವರ ಒತ್ತಡಗಳಿಂದ ಹೊರಬಂದು ಉತ್ತಮ ಮನಸ್ಥಿತಿ ಹೊಂದಲು ನೇರವಾಗುತ್ತದೆ ಎಂದರು.

ಚುನಾವಣೆಯ ಸಂದರ್ಭವಾದ್ದರಿಂದ ಬಹಳ ಕಡಿಮೆ ಸಮಯದಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಇದರಿಂದ ಚುನಾವಣಾ ಕೆಲಸದಲ್ಲಿ ಅಧಿಕಾರಿಗಳು ಇನ್ನೂ ಹೆಚ್ಚಿನ ಹುಮ್ಮಸಿನಿಂದ ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಆನಾರೋಗ್ಯ ಸಮಸ್ಯೆ ಹೆಚ್ಚಾಗುತ್ತಿದು ಎಲ್ಲಾ ಅಧಿಕಾರಿಗಳು ಕೆಲಸದ ಜೊತೆಗೆ ತಮ್ಮ ವಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಬಹಳ ಮುಖ್ಯ. ಪ್ರಸ್ತುತ ಜಿಮ್ ಗೆ ಹೋಗುವವರೇ ಹೆಚ್ಚಾಗಿ ಮರಣ ಹೊಂದುತ್ತಿದ್ದಾರೆ ಎಂಬ ಋಣಾತ್ಮಕ ಮಾಹಿತಿ ಎಲ್ಲೆಡೆ ಹರಡುತ್ತಿದ್ದು, ಆ ಯೋಚನೆಯನ್ನು ಮನಸ್ಸಿನಿಂದ ತೆಗೆದುಹಾಕಿ ದೇಹವನ್ನು ಸದೃಢವಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ನಾವೆಲ್ಲರೂ ಒಂದು ತಂಡವಾಗಿ ಯಾವುದೇ ಕಠಿಣ ಪರಿಸ್ಥಿತಿಯನ್ನು ಎದುರಿಸಲು ಕ್ರೀಡಾಕೂಟ ಸ್ಫೂರ್ತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್ ಮಂಜೇಗೌಡ, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ. ಎಂ ಗಾಯಿತ್ರಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago