ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಸೌಮ್ಯರೆಡ್ಡಿ ತಿರುಗೇಟು ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಮಾರ್ಚ್.9) ಈ ಕುರಿತು ಸುದ್ದಿಗೋಷ್ಠಿಸಿ ಮಾತನಾಡಿದ ಅವರು, ಬಿಜೆಪಿಯವರಿಗೆ ಹೊಟ್ಟೆಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಅಸೂಯೆಯಿಂದ ಹಾಗೇ ಹೇಳಿಕೆ ನೀಡುತ್ತಾರೆ, ಅಸೂಯೆಗೆ ಮಂದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಯಾರು ನಿರೀಕ್ಷೆ ಮಾಡದಿರುವ ಒಂದೊಳ್ಳೆ ಬಜೆಟ್ ಅನ್ನು ಮಂಡಿಸಿದ್ದಾರೆ. ಅಲ್ಲದೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ನೀಡಿದ್ದಾರೆ ಎಂದರು.
ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ರಾಜೀವ್ ಗಾಂಧಿಯವರ ಕನಸು
ದೇಶದಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕೆಂಬುದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕನಸಾಗಿತ್ತು. ಅಂತೆಯೇ ಮಹಿಳೆಯರ ಅಭಿವೃದ್ಧಿಗೆ ಸಿದ್ದರಾಮಯ್ಯನವರು ರಾಜ್ಯ ಬಜೆಟ್ನಲ್ಲಿ ಸುಮಾರು 93 ಸಾವಿರ ಕೋಟಿ ರೂ. ನೀಡಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ವಿರೋಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಮಹಿಳಾ ಸಮಾನತೆಗಾಗಿ ಆಗಿಂದಲೂ ಹೋರಾಟ ನಡೆಯುತ್ತಿದೆ. ಆದರೆ ಮಹಿಳೆಯರಿಗೆ ಇನ್ನೂ ಸಹ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಅಲ್ಲದೇ ಬಿಜೆಪಿಯವರು ಶೇ.33% ಮಹಿಳಾ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಬರುತ್ತಾರೆ. ಆದರೆ ಅದನ್ನು ಇಲ್ಲಿಯವೆಗೂ ಜಾರಿ ಮಾಡಿಲ್ಲ. ಹೀಗಾಗಿ ನಮಗೂ ಕಾಲ ಬರಲಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಬಂದಾಗ ಮಹಿಳಾ ಮೀಸಲಾತಿಯನ್ನು ಶೇ.33% ರಷ್ಟು ಜಾರಿ ಮಾಡುತ್ತದೆ ಎಂದು ತಿಳಿಸಿದರು.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…