ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿರುವ ರಾಜ್ಯ ಬಜೆಟ್ ಅನ್ನು ಬಿಜೆಪಿಯೂ ರಾಜ್ಯ ಬಜೆಟ್ ಮುಸ್ಲಿಮರ ತುಷ್ಟೀಕರಣ,ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕೆಪಿಸಿಸಿ ಮಹಿಳಾ ಅಧ್ಯಕ್ಷರಾದ ಸೌಮ್ಯರೆಡ್ಡಿ ತಿರುಗೇಟು ನೀಡಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಮಾರ್ಚ್.9) ಈ ಕುರಿತು ಸುದ್ದಿಗೋಷ್ಠಿಸಿ ಮಾತನಾಡಿದ ಅವರು, ಬಿಜೆಪಿಯವರಿಗೆ ಹೊಟ್ಟೆಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಅಸೂಯೆಯಿಂದ ಹಾಗೇ ಹೇಳಿಕೆ ನೀಡುತ್ತಾರೆ, ಅಸೂಯೆಗೆ ಮಂದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಯಾರು ನಿರೀಕ್ಷೆ ಮಾಡದಿರುವ ಒಂದೊಳ್ಳೆ ಬಜೆಟ್ ಅನ್ನು ಮಂಡಿಸಿದ್ದಾರೆ. ಅಲ್ಲದೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ನೀಡಿದ್ದಾರೆ ಎಂದರು.
ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ರಾಜೀವ್ ಗಾಂಧಿಯವರ ಕನಸು
ದೇಶದಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕೆಂಬುದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಕನಸಾಗಿತ್ತು. ಅಂತೆಯೇ ಮಹಿಳೆಯರ ಅಭಿವೃದ್ಧಿಗೆ ಸಿದ್ದರಾಮಯ್ಯನವರು ರಾಜ್ಯ ಬಜೆಟ್ನಲ್ಲಿ ಸುಮಾರು 93 ಸಾವಿರ ಕೋಟಿ ರೂ. ನೀಡಿದ್ದಾರೆ. ಅದನ್ನು ಸಹಿಸಿಕೊಳ್ಳಲಾಗದೆ ಬಿಜೆಪಿಯವರು ವಿರೋಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಮಹಿಳಾ ಸಮಾನತೆಗಾಗಿ ಆಗಿಂದಲೂ ಹೋರಾಟ ನಡೆಯುತ್ತಿದೆ. ಆದರೆ ಮಹಿಳೆಯರಿಗೆ ಇನ್ನೂ ಸಹ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ. ಅಲ್ಲದೇ ಬಿಜೆಪಿಯವರು ಶೇ.33% ಮಹಿಳಾ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿಕೊಂಡು ಬರುತ್ತಾರೆ. ಆದರೆ ಅದನ್ನು ಇಲ್ಲಿಯವೆಗೂ ಜಾರಿ ಮಾಡಿಲ್ಲ. ಹೀಗಾಗಿ ನಮಗೂ ಕಾಲ ಬರಲಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಬಂದಾಗ ಮಹಿಳಾ ಮೀಸಲಾತಿಯನ್ನು ಶೇ.33% ರಷ್ಟು ಜಾರಿ ಮಾಡುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…