ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ ಮಹಡಿಯಲ್ಲಿ ಬುಧವಾರ ಸಂಜೆ ಭೂ ಸುರಕ್ಷಾ ಯೋಜನೆಯ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಿರುಮಕೂಡಲಿನಲ್ಲಿ ಫೆ.೧೦, ೧೧ ಹಾಗೂ ೧೨ರಂದು ೩ ದಿನಗಳ ಕಾಲ ಆಯೋಜನೆಗೊಳ್ಳಲಿರುವ ಕುಂಭಮೇಳಕ್ಕೆ ದಿನಗಣನೆ ಆರಂಭವಾಗಿದ್ದರೂ ಯಾವುದೇ ಪೂರ್ವ ಸಿದ್ಧತೆ ಹಾಗೂ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳದಿರುವ ಬಗ್ಗೆ ಗಮನ ಸೆಳೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಾಳೆಯೇ ಸಿಎಂ ಸಭೆಗೆ ಸಮಯವನ್ನು ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭಾಗಿಯಾಗಿ ಸಿದ್ಧತಾ ಕಾರ್ಯಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು.
ತಾಲ್ಲೂಕು ಕಚೇರಿಯಲ್ಲಿ ಇನ್ನು ಮುಂದೆ ದಾಖಲೆಗಳ ಸುರಕ್ಷತೆಗಾಗಿ ಭೂ ದಾಖಲೆಗಳನ್ನು ಗಣಕೀಕೃತ ಯಂತ್ರದಲ್ಲಿ ದಾಖಲು ಮಾಡಲಾಗಿದ್ದು, ದಾಖಲೆಗಳ ಹುಡುಕಾಟ ನಡೆಸಲು ಕಾಲಾವಕಾಶ ಪಡೆಯಲಾಗುತ್ತಿತ್ತು. ಕೆಲವು ದಾಖಲೆಗಳು ಹಳೆಯದಾದ್ದರಿಂದ ಹುಡುಕಾಟದ ಸಂದರ್ಭದಲ್ಲಿ ಪುಟಗಳು ಹರಿದು ಹೋಗುತ್ತಿದ್ದವು. ಕಂಪ್ಯೂಟರ್ನಲ್ಲಿ ಅಳವಡಿಸಿರುವುದರಿಂದ ಎಲ್ಲಾ ದಾಖಲೆಗಳು ಯಥಾವತ್ತಾಗಿ ಸಾರ್ವಜನಿಕರಿಗೆ ಸಿಗಲಿವೆ ಎಂದು ಸುನಿಲ್ ಬೋಸ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಂಸದರು ಶಿಥಿಲಗೊಂಡಿರುವ ತಾಲ್ಲೂಕು ಆಡಳಿತ ಸೌಧದ ನೆಲ ಅಂತಸ್ತಿನ ಆವರಣವನ್ನು ದುರಸ್ತಿಗೊಳಿಸುವಂತೆ ಸ್ಥಳದಲ್ಲಿಯೇ ಇದ್ದ ಲೋಕೋಪಯೋಗಿ ಇಲಾಖೆ ಎಇಇ ಎಸ್.ಸತೀಶ್ ಚಂದ್ರನ್ ಅವರಿಗೆ ಸೂಚಿಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…