Fraud cases on the rise in Mandya district
ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ.
ಮೊದಲನೇ ಪ್ರಕರಣದಲ್ಲಿ ವಿವೇಕಾನಂದನಗರ ನಿವಾಸಿ,ಯೋಗ ಶಿಕ್ಷಕಿಯೊಬ್ಬರು ವಂಚಕನ ಮಾತಿಗೆ ಮರುಳಾಗಿ ೧೦.೦೯ ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಜರ್ಮನ್ ದೇಶದ ಪ್ರಜೆ ಎಂದು ಪರಿಚಯಿಸಿಕೊಂಡ ಅಪರಿಚಿತ ತಾನು ಯೋಗ ಶಾಲೆಗೆ ದಾಖಲಾಗುವುದಾಗಿ ಹೇಳಿಕೊಂಡಿದ್ದಾನೆ. ನಂತರ ನೀವು ಯೋಗ ಶಿಕ್ಷಣವನ್ನು ಉತ್ತಮವಾಗಿ ಹೇಳಿಕೊಡುತ್ತೀರಿ. ಹೀಗಾಗಿ ನಿಮಗೆ ೫೦ ಲಕ್ಷ ರೂ. ಬೆಲೆಬಾಳುವ ಉಡುಗೊರೆ ನೀಡುತ್ತಿರುವುದಾಗಿ ತಿಳಿಸಿದ್ದಾನೆ. ನಂತರ ಇಲ್ಲಿ ಕಸ್ಟಮ್ಸ್ ಹಣ ಪಾವತಿಸಬೇಕು. ಹೀಗಾಗಿ ೧೦.೦೯ ಲಕ್ಷ ರೂ.ಗಳನ್ನು ಖಾತೆಗೆ ಹಾಕುವಂತೆ ತಿಳಿಸಿದ್ದಾನೆ. ನಂತರ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹೀಗಾಗಿ ಅವರಿಗೆ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.
ಎರಡನೇ ಪ್ರಕರಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ವಂಚಕರ ಮಾತನ್ನು ನಂಬಿದ ಗೋಕುಲಂನ ವ್ಯಕ್ತಿಯೊಬ್ಬರು ೨೯.೦೪ ಲಕ್ಷ ರೂ. ಕಳೆದುಕೊಂಡಿದ್ದಾರೆ.
ಇನ್ಸ್ಟಾ ಗ್ರಾಂ ಮೂಲಕ ಅವರು ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಂಡಿದ್ದಾರೆ. ನಂತರ ಅಲ್ಲಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ವಂಚಕರು ಹೇಳಿದಂತೆ ಅವರ ಖಾತೆಗೆ ಹಣ ಜಮೆ ಮಾಡಿದ್ದಾರೆ. ನಂತರ ಅವರಿಗೆ ಯಾವ ಲಾಭವೂ ಬಂದಿಲ್ಲ. ನಂತರ ಅವರಿಗೆ ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ.
ಇದನ್ನೂ ಓದಿ:-ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್ಗೆ ಮೊದಲ ಸ್ಥಾನ
ಮೂರನೇ ಪ್ರಕರಣದಲ್ಲಿ ಆನ್ಲೈನ್ ಮೂಲಕ ಉದ್ಯೋಗ ಗಿಟ್ಟಿಸಿದ್ದ ಮಹಿಳೆಯೊಬ್ಬರು ನಂತರ ನಕಲಿ ಕಂಪೆನಿ ಸಿಬ್ಬಂದಿಯ ಮಾತನ್ನು ನಂಬಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ೮ ಲಕ್ಷ ರೂ. ಕಳೆದುಕೊಂಡಿದ್ದಾರೆ.
ಚಲನಚಿತ್ರಗಳನ್ನು ಪ್ರಮೋಟ್ ಮಾಡುವ ಕೆಲಸಕ್ಕೆ ಸೇರಿದ ಮಹಿಳೆ ಮೊದಲು ೬ ಸಾವಿರ ರೂ. ಗಳನ್ನು ನಕಲಿ ಕಂಪೆನಿ ಮೂಲಕ ಪಡೆದಿದ್ದಾರೆ. ನಂತರ ಷೇರು ಮಾರುಕಟ್ಟೆ ಬಗ್ಗೆ ಅವರಿಂದ ಉತ್ತೇಜಿತರಾದ ಆಕೆ ೮ ಲಕ್ಷ ರೂ.ಗಳನ್ನು ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…
ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.11ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ…
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…
ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ ಮತ್ತೆ ಸಮನ್ಸ್ ನೀಡಿದೆ. ಕಳೆದ…