ಮೈಸೂರು

ಪ್ರತ್ಯೇಕ ಪ್ರಕರಣ | 48 ಲಕ್ಷ ರೂ ವಂಚನೆ

ಮೈಸೂರು : ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಆನ್‌ಲೈನ್ ವಂಚನೆಗೆ ಒಳಗಾಗಿರುವ ಮೂವರು ಸುಮಾರು ೪೮ ಲಕ್ಷ ರೂ.ಗಳನ್ನು ವಂಚಕರ ಖಾತೆಗೆ ಜಮೆ ಮಾಡಿ ಕಳೆದುಕೊಂಡಿದ್ದಾರೆ.

ಮೊದಲನೇ ಪ್ರಕರಣದಲ್ಲಿ ವಿವೇಕಾನಂದನಗರ ನಿವಾಸಿ,ಯೋಗ ಶಿಕ್ಷಕಿಯೊಬ್ಬರು ವಂಚಕನ ಮಾತಿಗೆ ಮರುಳಾಗಿ ೧೦.೦೯ ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ. ಜರ್ಮನ್ ದೇಶದ ಪ್ರಜೆ ಎಂದು ಪರಿಚಯಿಸಿಕೊಂಡ ಅಪರಿಚಿತ ತಾನು ಯೋಗ ಶಾಲೆಗೆ ದಾಖಲಾಗುವುದಾಗಿ ಹೇಳಿಕೊಂಡಿದ್ದಾನೆ. ನಂತರ ನೀವು ಯೋಗ ಶಿಕ್ಷಣವನ್ನು ಉತ್ತಮವಾಗಿ ಹೇಳಿಕೊಡುತ್ತೀರಿ. ಹೀಗಾಗಿ ನಿಮಗೆ ೫೦ ಲಕ್ಷ ರೂ. ಬೆಲೆಬಾಳುವ ಉಡುಗೊರೆ ನೀಡುತ್ತಿರುವುದಾಗಿ ತಿಳಿಸಿದ್ದಾನೆ. ನಂತರ ಇಲ್ಲಿ ಕಸ್ಟಮ್ಸ್ ಹಣ ಪಾವತಿಸಬೇಕು. ಹೀಗಾಗಿ ೧೦.೦೯ ಲಕ್ಷ ರೂ.ಗಳನ್ನು ಖಾತೆಗೆ ಹಾಕುವಂತೆ ತಿಳಿಸಿದ್ದಾನೆ. ನಂತರ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹೀಗಾಗಿ ಅವರಿಗೆ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಎರಡನೇ ಪ್ರಕರಣದಲ್ಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂಬ ವಂಚಕರ ಮಾತನ್ನು ನಂಬಿದ ಗೋಕುಲಂನ ವ್ಯಕ್ತಿಯೊಬ್ಬರು ೨೯.೦೪ ಲಕ್ಷ ರೂ. ಕಳೆದುಕೊಂಡಿದ್ದಾರೆ.
ಇನ್ಸ್ಟಾ ಗ್ರಾಂ ಮೂಲಕ ಅವರು ಷೇರು ಮಾರುಕಟ್ಟೆಯ ಬಗ್ಗೆ ತಿಳಿದುಕೊಂಡಿದ್ದಾರೆ. ನಂತರ ಅಲ್ಲಿನ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ವಂಚಕರು ಹೇಳಿದಂತೆ ಅವರ ಖಾತೆಗೆ ಹಣ ಜಮೆ ಮಾಡಿದ್ದಾರೆ. ನಂತರ ಅವರಿಗೆ ಯಾವ ಲಾಭವೂ ಬಂದಿಲ್ಲ. ನಂತರ ಅವರಿಗೆ ತಾವು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ.

ಇದನ್ನೂ ಓದಿ:-ಶ್ವಾನ ಪ್ರದರ್ಶನ : ಜರ್ಮನ್ ಶಫರ್ಡ್‌ಗೆ ಮೊದಲ ಸ್ಥಾನ

ಮೂರನೇ ಪ್ರಕರಣದಲ್ಲಿ ಆನ್‌ಲೈನ್ ಮೂಲಕ ಉದ್ಯೋಗ ಗಿಟ್ಟಿಸಿದ್ದ ಮಹಿಳೆಯೊಬ್ಬರು ನಂತರ ನಕಲಿ ಕಂಪೆನಿ ಸಿಬ್ಬಂದಿಯ ಮಾತನ್ನು ನಂಬಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ೮ ಲಕ್ಷ ರೂ. ಕಳೆದುಕೊಂಡಿದ್ದಾರೆ.
ಚಲನಚಿತ್ರಗಳನ್ನು ಪ್ರಮೋಟ್ ಮಾಡುವ ಕೆಲಸಕ್ಕೆ ಸೇರಿದ ಮಹಿಳೆ ಮೊದಲು ೬ ಸಾವಿರ ರೂ. ಗಳನ್ನು ನಕಲಿ ಕಂಪೆನಿ ಮೂಲಕ ಪಡೆದಿದ್ದಾರೆ. ನಂತರ ಷೇರು ಮಾರುಕಟ್ಟೆ ಬಗ್ಗೆ ಅವರಿಂದ ಉತ್ತೇಜಿತರಾದ ಆಕೆ ೮ ಲಕ್ಷ ರೂ.ಗಳನ್ನು ಹೂಡಿಕೆ ಮಾಡಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

45 seconds ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

22 mins ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

26 mins ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

2 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

3 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

4 hours ago