ಮೈಸೂರು

ಗೌರಿ ಗಣೇಶ ಹಬ್ಬದ ಪ್ರಯುಕ್ತ ಅರಮನೆಯಲ್ಲಿ ಗಜಪಡೆಗೆ ವಿಶೇಷ ಪೂಜೆ

ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್‌ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.

ಕಳೆದ 26 ವರ್ಷಗಳಿಂದ ಗಜಪಡೆಗೆ ಪೂಜೆ ಸಲ್ಲಿಸುತ್ತಿರುವ ಅರ್ಚಕರಾದ ಪ್ರಹ್ಲಾದ್ ರಾವ್ ಮಾತನಾಡಿ, ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತ್ಯಕ್ಷ ಗಣಪತಿಯಾದ ಗಜಪಡೆಯ ಕಾಲು ತೊಳೆದು, ಅರಿಶಿಣ ಕುಂಕುಮ, ಬಿಲ್ವಪತ್ರೆ ಇಟ್ಟು, ಗಣಪತಿಗೆ ವಿಶೇಷವಾದ ಪಂಚಫಲಗಳನ್ನು ಇಟ್ಟು ಮಹಾಮಂಗಳಾರತಿ ಮಾಡಲಾಗುತ್ತದೆ. ಜೊತೆಗೆ ಆನೆಗಳಿಗೆ ನವಧಾನ್ಯಗಳನ್ನು ಕೊಟ್ಟು, ದೃಷ್ಟಿ ತೆಗೆದು ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈ ಬಾರಿ ಚಾತುರ್ಮಾಸ ವ್ರತಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲೇ ಇರುವ ಪೇಜಾವರ ಶ್ರೀಗಳು, ಗಣೇಶ ಗೌರಿ ಹಬ್ಬದ ಹಿನ್ನೆಲೆಯಲ್ಲಿ ಅರಮನೆಗೆ ಆಗಮಿಸಿ, ಗಜಪಡೆಗೆ ಪೂಜೆ ಸಲ್ಲಿಸಿ, ನಂತರ ಎಲ್ಲಾ ಗಜಪಡೆಗೂ ಬಾಳೆಹಣ್ಣು ತಿನ್ನಿಸಿದರು. ಬಳಿಕ, ಈ ಬಾರಿ ನಾಡ ಹಬ್ಬ ದಸರಾ ಯಾವುದೇ ವಿಘ್ನಗಳಿಲ್ಲದೆ ನಿರ್ವಿಘ್ನವಾಗಿ ನಡೆಯಲಿ ಎಂದು ವಿನಾಯಕ ಹಾಗೂ ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಬಳಿಕ ಡಿಸಿಎಫ್ ಸೌರವ್ ಕುಮಾರ್ ಮಾತನಾಡಿ, ಗಣೇಶ ಚತುರ್ಥಿಯ ದಿನ ಗಜಪಡೆಗೆ ಪೂಜೆ ಸಲ್ಲಿಸುವಾಗಲೇ ಮಳೆ ಕೂಡ ಬಂದಿದ್ದು, ಇದು ಶುಭ ಸೂಚನೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಮಳೆ ಬರಲಿ, ಎಲ್ಲವೂ ಒಳ್ಳೆಯದಾಗಲಿ ಎಂದು ತಾಯಿಯನ್ನು ಪ್ರಾರ್ಥಿಸುತ್ತೇನೆ ಎಂದರು.

ರಾಜ್ಯದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ಉಂಟಾಗಿದ್ದರೂ, ಗಜಪಡೆಗೆ ಪೂಜೆ ಸಲ್ಲಿಸುವಾಗ ಜೋರಾದ ಮಳೆ ಬಂದು, ಪೂಜೆ ನಿಂತ ನಂತರ ಮಳೆಯೂ ನಿಂತುಹೋಗಿದ್ದು ವಿಶೇಷ.

lokesh

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

2 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

3 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

6 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

8 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

9 hours ago