ಮೈಸೂರು

ಗೌರಿ ಗಣೇಶ ಹಬ್ಬದ ಪ್ರಯುಕ್ತ ಅರಮನೆಯಲ್ಲಿ ಗಜಪಡೆಗೆ ವಿಶೇಷ ಪೂಜೆ

ಮೈಸೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿರುವ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಅರಮನೆಯ ಮುಂಭಾಗದಲ್ಲಿ ವಿಶೇಷವಾಗಿ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.

ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಗಳಾದ ಅರ್ಜುನ, ಭೀಮ, ಮಹೇಂದ್ರ, ಧನಂಜಯ, ಗೋಪಿ, ಕಂಜನ್ ಮತ್ತು ಹೆಣ್ಣಾನೆಗಳಾದ ವಿಜಯ ಹಾಗೂ ವರಲಕ್ಷ್ಮಿ ಆನೆಗಳಿಗೆ ಅರಮನೆಯ ಮುಂಭಾಗದ ಆನೆ ಮಾವುತರ ಶೆಡ್‌ನ ಹಿಂಭಾಗದಲ್ಲಿ ಮೈಸೂರಿನ ಅರಮನೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಯಿತು.

ಕಳೆದ 26 ವರ್ಷಗಳಿಂದ ಗಜಪಡೆಗೆ ಪೂಜೆ ಸಲ್ಲಿಸುತ್ತಿರುವ ಅರ್ಚಕರಾದ ಪ್ರಹ್ಲಾದ್ ರಾವ್ ಮಾತನಾಡಿ, ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತ್ಯಕ್ಷ ಗಣಪತಿಯಾದ ಗಜಪಡೆಯ ಕಾಲು ತೊಳೆದು, ಅರಿಶಿಣ ಕುಂಕುಮ, ಬಿಲ್ವಪತ್ರೆ ಇಟ್ಟು, ಗಣಪತಿಗೆ ವಿಶೇಷವಾದ ಪಂಚಫಲಗಳನ್ನು ಇಟ್ಟು ಮಹಾಮಂಗಳಾರತಿ ಮಾಡಲಾಗುತ್ತದೆ. ಜೊತೆಗೆ ಆನೆಗಳಿಗೆ ನವಧಾನ್ಯಗಳನ್ನು ಕೊಟ್ಟು, ದೃಷ್ಟಿ ತೆಗೆದು ಪೂಜೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಈ ಬಾರಿ ಚಾತುರ್ಮಾಸ ವ್ರತಾಚರಣೆಯ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲೇ ಇರುವ ಪೇಜಾವರ ಶ್ರೀಗಳು, ಗಣೇಶ ಗೌರಿ ಹಬ್ಬದ ಹಿನ್ನೆಲೆಯಲ್ಲಿ ಅರಮನೆಗೆ ಆಗಮಿಸಿ, ಗಜಪಡೆಗೆ ಪೂಜೆ ಸಲ್ಲಿಸಿ, ನಂತರ ಎಲ್ಲಾ ಗಜಪಡೆಗೂ ಬಾಳೆಹಣ್ಣು ತಿನ್ನಿಸಿದರು. ಬಳಿಕ, ಈ ಬಾರಿ ನಾಡ ಹಬ್ಬ ದಸರಾ ಯಾವುದೇ ವಿಘ್ನಗಳಿಲ್ಲದೆ ನಿರ್ವಿಘ್ನವಾಗಿ ನಡೆಯಲಿ ಎಂದು ವಿನಾಯಕ ಹಾಗೂ ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ಬಳಿಕ ಡಿಸಿಎಫ್ ಸೌರವ್ ಕುಮಾರ್ ಮಾತನಾಡಿ, ಗಣೇಶ ಚತುರ್ಥಿಯ ದಿನ ಗಜಪಡೆಗೆ ಪೂಜೆ ಸಲ್ಲಿಸುವಾಗಲೇ ಮಳೆ ಕೂಡ ಬಂದಿದ್ದು, ಇದು ಶುಭ ಸೂಚನೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಮಳೆ ಬರಲಿ, ಎಲ್ಲವೂ ಒಳ್ಳೆಯದಾಗಲಿ ಎಂದು ತಾಯಿಯನ್ನು ಪ್ರಾರ್ಥಿಸುತ್ತೇನೆ ಎಂದರು.

ರಾಜ್ಯದಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ಉಂಟಾಗಿದ್ದರೂ, ಗಜಪಡೆಗೆ ಪೂಜೆ ಸಲ್ಲಿಸುವಾಗ ಜೋರಾದ ಮಳೆ ಬಂದು, ಪೂಜೆ ನಿಂತ ನಂತರ ಮಳೆಯೂ ನಿಂತುಹೋಗಿದ್ದು ವಿಶೇಷ.

lokesh

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

2 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

5 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

5 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

5 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

5 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

9 hours ago