ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಮೈಸೂರು ವಿ.ವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಎನ್.ಮಮತ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡಯೊಂದನ್ನು ಸಾಮಾಜಿಕ ಜಾಲತಾಣ ನಿರ್ವಹಣೆಗೆ ನೇಮಿಸಿದೆ.
ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರವೂ ಬಹಳ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೈಸೂರು ಕ್ಷೇತ್ರವಾರು ಚುನಾವಣಾ ಕಾರ್ಯಕ್ರಮಗಳು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಪ್ರಕ್ರಿಯೆ ಮಾಹಿತಿ, ಕ್ಷೇತ್ರವಾರು ಭೇಟಿ, ಪರಿಶೀಲನೆ ಗಳನ್ನು ಈ ಜಾಲತಾಣದಲ್ಲಿ ಕಾಣಬಹುದಾಗಿದೆ.
ಆಗ್ಗಾಗೆ ಚುನಾವಣಾ ಆಯೋಗದಿಂದ ಹೊರಡಿಸುವ ಆದೇಶಗಳು, ಮತದಾನದ ಕುರಿತ ಜಾಗೃತಿ ಕಾರ್ಯಕ್ರಮಗಳು , ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಕಾರ್ಯವೈಖರಿಯನ್ನು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಟ್ವಿಟರ್, ಇನ್ಸ್ಟಗ್ರಾಮ್ ನ dcmysuru ಖಾತೆಯ ಮೂಲಕ ಮಾಹಿತಿ ತಲುಪಿಸುವುದು ಇದರ ಉದ್ದೇಶ ವಾಗಿದ್ದು, ಹಾಗೇಯೇ ಇದರಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿರುವುದು ಚುನಾವಣಾ ಪ್ರಕ್ರಿಯೆ ಬಗ್ಗೆ ಅರಿಯಲು ಉತ್ತಮ ಅನುಕೂಲವಾಗಲಿದೆ.





