ಮೈಸೂರು

ಚುನಾವಣಾ ಸಂಬಂಧ ಜಿಲ್ಲಾಧಿಕಾರಿ ಕಾರ್ಯಾಲಯದ ಸಾಮಾಜಿಕ ಜಾಲತಾಣ ನಿರ್ವಹಣೆಗೆ ವಿಶೇಷ ತಂಡ

ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಮೈಸೂರು ವಿ.ವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಎನ್.ಮಮತ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡಯೊಂದನ್ನು ಸಾಮಾಜಿಕ ಜಾಲತಾಣ ನಿರ್ವಹಣೆಗೆ ನೇಮಿಸಿದೆ.

ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರವೂ ಬಹಳ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೈಸೂರು ಕ್ಷೇತ್ರವಾರು ಚುನಾವಣಾ ಕಾರ್ಯಕ್ರಮಗಳು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಪ್ರಕ್ರಿಯೆ ಮಾಹಿತಿ, ಕ್ಷೇತ್ರವಾರು ಭೇಟಿ, ಪರಿಶೀಲನೆ ಗಳನ್ನು ಈ ಜಾಲತಾಣದಲ್ಲಿ ಕಾಣಬಹುದಾಗಿದೆ.

ಆಗ್ಗಾಗೆ ಚುನಾವಣಾ ಆಯೋಗದಿಂದ ಹೊರಡಿಸುವ ಆದೇಶಗಳು, ಮತದಾನದ ಕುರಿತ ಜಾಗೃತಿ ಕಾರ್ಯಕ್ರಮಗಳು , ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಕಾರ್ಯವೈಖರಿಯನ್ನು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಟ್ವಿಟರ್, ಇನ್ಸ್ಟಗ್ರಾಮ್ ನ dcmysuru ಖಾತೆಯ ಮೂಲಕ ಮಾಹಿತಿ ತಲುಪಿಸುವುದು ಇದರ ಉದ್ದೇಶ ವಾಗಿದ್ದು, ಹಾಗೇಯೇ ಇದರಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿರುವುದು ಚುನಾವಣಾ ಪ್ರಕ್ರಿಯೆ ಬಗ್ಗೆ ಅರಿಯಲು ಉತ್ತಮ ಅನುಕೂಲವಾಗಲಿದೆ.

andolanait

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

1 hour ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

1 hour ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

1 hour ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

2 hours ago