ಮೈಸೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಮೈಸೂರು ವಿ.ವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕರಾದ ಎನ್.ಮಮತ ನೇತೃತ್ವದಲ್ಲಿ ವಿದ್ಯಾರ್ಥಿಗಳ ತಂಡಯೊಂದನ್ನು ಸಾಮಾಜಿಕ ಜಾಲತಾಣ ನಿರ್ವಹಣೆಗೆ ನೇಮಿಸಿದೆ.
ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಪ್ರಚಾರವೂ ಬಹಳ ಕ್ಷಿಪ್ರಗತಿಯಲ್ಲಿ ನಡೆಯುತ್ತಿದ್ದು ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೈಸೂರು ಕ್ಷೇತ್ರವಾರು ಚುನಾವಣಾ ಕಾರ್ಯಕ್ರಮಗಳು, ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಪ್ರಕ್ರಿಯೆ ಮಾಹಿತಿ, ಕ್ಷೇತ್ರವಾರು ಭೇಟಿ, ಪರಿಶೀಲನೆ ಗಳನ್ನು ಈ ಜಾಲತಾಣದಲ್ಲಿ ಕಾಣಬಹುದಾಗಿದೆ.
ಆಗ್ಗಾಗೆ ಚುನಾವಣಾ ಆಯೋಗದಿಂದ ಹೊರಡಿಸುವ ಆದೇಶಗಳು, ಮತದಾನದ ಕುರಿತ ಜಾಗೃತಿ ಕಾರ್ಯಕ್ರಮಗಳು , ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾಡಳಿತ ಕಾರ್ಯವೈಖರಿಯನ್ನು ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ಟ್ವಿಟರ್, ಇನ್ಸ್ಟಗ್ರಾಮ್ ನ dcmysuru ಖಾತೆಯ ಮೂಲಕ ಮಾಹಿತಿ ತಲುಪಿಸುವುದು ಇದರ ಉದ್ದೇಶ ವಾಗಿದ್ದು, ಹಾಗೇಯೇ ಇದರಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿರುವುದು ಚುನಾವಣಾ ಪ್ರಕ್ರಿಯೆ ಬಗ್ಗೆ ಅರಿಯಲು ಉತ್ತಮ ಅನುಕೂಲವಾಗಲಿದೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…