ಮೈಸೂರು

ಯುಗಾದಿ-ರಂಜಾನ್‌ಗೆ ಮೈಸೂರು-ವಿಜಯಪುರ ನಡುವೆ ವಿಶೇಷ ರೈಲು ; ಇಲ್ಲಿದೆ ವೇಳಾಪಟ್ಟಿ

ಮೈಸೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

ರೈಲು ಸಂಖ್ಯೆ ೦೬೫೬೭ ಮೈಸೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೨೮ರಂದು ಸಂಜೆ ೭.೧೦ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ ೨.೦೫ಕ್ಕೆ ವಿಜಯಪುರ ತಲುಪಲಿದೆ.

ರೈಲು ಸಂಖ್ಯೆ ೦೬೫೬೮ ವಿಜಯಪುರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮಾ.೩೧ರಂದು ಸಂಜೆ ೭ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ ೨.೨೦ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ರೈಲು ೩ ಎಸಿ ಟು ಟೈರ್, ೬ ಎಸಿ ತ್ರಿ ಟೈರ್, ೧೦ ಸ್ಲೀಪರ್ ಕ್ಲಾಸ್, ೨ ಜನರಲ್ ಸೆಕೆಂಡ್ ಕ್ಲಾಸ್ ಮತ್ತು ೨ ಎಸ್‌ಎಲಆರ್/ ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ನೈಋತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

9 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago