ಮೈಸೂರು : ದೀಪಾವಳಿ ಹಬ್ಬದ ಹಿನ್ನೆಲೆ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಇದಕ್ಕೆ ಕ್ರಮ ಕೈಗೊಂಡಿದೆ.
ದೀಪಾವಳಿ ಹಬ್ಬದ ಸಮಯದಲ್ಲಿ ಜನದಟ್ಟಣೆಯನ್ನು ತಪ್ಪಿಸಲು ಹಾಗೂ ಮೈಸೂರಿನಿಂದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುವುದರಿಂದ ತಾತ್ಕಾಲಿಕವಾಗಿ ಹೊಸ ರೈಲು ಪರಿಚಯಿಸಲು ರೈಲ್ವೆ ಇಲಾಖೆ ಕ್ರಮ ಕೈಗೊಂಡಿದೆ.
ಇದನ್ನು ಓದಿ: ಮ.ಬೆಟ್ಟ: ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆ
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಮೈಸೂರಿನಿಂದ ರಾಜಸ್ತಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಜನದಟ್ಟಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆಯು ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ರೈಲು ಸಂಚಾರಕ್ಕೆ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ರಾಜಸ್ತಾನದ ಜನರು ಹಾಗೂ ಇತರರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…
ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…
ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…
ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…
ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…
ಮಹಾದೇಶ್ ಎಂ ಗೌಡ ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…