ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ.
ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ಮೈಸೂರಿನಿಂದ ಏ.17 ಮತ್ತು 24ಕ್ಕೆ ಹೊರಡಲಿದೆ.
ವಾಪಸಾಗುವಾಗ ರೈಲು ಸಂಖ್ಯೆ 06252 ಜಲ್ಪೈಗುರಿ ಜಂಕ್ಷನ್-ಮೈಸೂರು ವಿಶೇಷ ರೈಲು ಅಲ್ಲಿಂದ ಏ.20 ಮತ್ತು 27 ರಂದು ಎಂದು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.
ಎರಡೂ ರೈಲುಗಳು 20 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 1 ಫಸ್ಟ್ ಎಸಿ 2-ಟೈಯರ್, 2 ಎಸಿ 3-ಟೈಯರ್, 10 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ಡಿ ಬೋಗಿಗಳು ಸೇರಿವೆ.
ರೈಲುಗಳು ಮಂಡ್ಯ, ಮದ್ದೂರು, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬಂಗಾರಪೇಟೆ, ಜೋಲಾರ್ಪೇಟ್, ಕಟ್ಪಾಡಿ, ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಹೇಂದ್ರಿ, ಸಿಂಹಾಚಲಂ ನಾರ್ಥ್, ಕೋಟವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸಾ, ಬ್ರಹ್ಮಪುರ್, ಬಾಲುಗಾಂ, ಖುರ್ದಾ ರೋಡ್, ಭುವನೇಶ್ವರ, ಕಟಕ್, ಜಾಜ್ಪುರ್ ಕೆ ರೋಡ್, ಭದ್ರಕ್, ಬಾಲಸೋರ್, ಖರಗ್ಪುರ್, ಆಂಡುಲ್, ದಾಂಕುನಿ, ಬರ್ಧಮಾನ್, ಬೋಲ್ಪುರ್, ರಾಂಪುರ್ ಹಾಟ್, ನ್ಯೂ ಫರಕ್ಕಾ, ಮಾಲ್ದಾ ಟೌನ್, ಕಿಶನ್ಗಂಜ್ ನಿಲ್ದಾಣಗಳಲ್ಲಿ ಎರಡು ದಿಕ್ಕುಗಳಲ್ಲಿ ನಿಲುಗಡೆ ಹೊಂದಿದೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…