ನಂಜನಗೂಡು : ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮೈಸೂರಿನ ಸೆಂಟ್ ಫಿಲೋಮಿಯ ಶಾಲೆಯ ಆವರಣದಲ್ಲಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ದೈಹಿಕ ಶಿಕ್ಷಣ ವಿಭಾಗ, ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಮತ್ತು ವಿಜ್ಞಾನ ಕಾಲೇಜಿನ ವಿಶೇಷ ಚೇತನ ಮಕ್ಕಳು ಭಾಗವಹಿಸಿ ವಿಜೇತರಾಗಿ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು.
ಇದನ್ನು ಓದಿ: ಹುಲಿ ದರ್ಶನ : ಗ್ರಾಮಸ್ಥರಲ್ಲಿ ಆತಂಕ
ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸಮರ್ಥ್, ಜಾವೆಲಿನ್ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಮೊದಲ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಕ್ಕಳ ತರಬೇತುದಾರರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್ ಮತ್ತು ಮನುನಾಗರಾಜ್ ರವರ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಹೇಮಕುಮಾರ್, ವಸತಿ ನಿಲಯ ಪಾಲಕ ಕೆ.ಬಿ ಮಂಜು, ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್, ಮನು ನಾಗರಾಜು, ಉಪನ್ಯಾಸಕರಾದ ಲತಾಮಣಿ, ಮಾಲಾಶ್ರೀ, ರೂಪಿಣಿ, ವಿನೋದ್, ಮಧು, ಗೌರಿ ಮನೋಹರ್, ಶಿಕ್ಷಕರಾದ ಶಾಲಿನಿ , ಕಾವ್ಯ, ಸರಸ್ವತಿ, ರಂಜಿತಾ, ಮಹದೇವಪ್ರಸಾದ್, ನವೀನ್, ಪ್ರಸಾದ್ ಮೂರ್ತಿ, ಸಚಿನ್, ರವಿ, ಸಿಬ್ಬಂದಿಗಳಾದ ವಿನಾಯಕ ಬಾಳೆಕಾಯಿ, ನವೀನ್, ಆನಂದ್, ಪದ್ಮಾ, ಮಹೇಶ್ ಅಭಿನಂದನೆ ಸಲ್ಲಿಸಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…