ಮೈಸೂರು

ದಸರಾ ಪ್ರಾಯೋಜಕತ್ವ ವಹಿಸಿಕೊಳ್ಳಿ, ನಿಮ್ಮ ವ್ಯಾಪಾರ ಉದ್ದಿಮೆಗಳ ಉದ್ದೀಪನಗೊಳಿಸಿಕೊಳ್ಳಿ – ಹೆಚ್.ಸಿ.ಎಂ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮದಲ್ಲಿ ಪ್ರಾಯೋಜಕತ್ವ ನೀಡುವ ಮೂಲಕ ತಮ್ಮ ವ್ಯಾಪಾರ ವಹಿವಾಟುಗಳನ್ನು ವಿಸ್ತರಿಸಿಕೊಳ್ಳುವ ಸದಾವಕಾಶವನ್ನು ಸದುಪಯೋಗಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಹೇಳಿದರು.

ನಗರದ ಲಲಿತ ಮಹಲ್ ಪ್ಯಾಲೇಸ್ ನಲ್ಲಿ ಬುಧುವಾರ ನಡೆದ ದಸರಾ ಪ್ರಾಯೋಜಕತ್ವದ ಸಭೆಯಲ್ಲಿ ಮಾತನಾಡಿದ ಅವರು, ದಸರಾ ಕಾರ್ಯಕ್ರಮಕ್ಕೆ ದೇಶ ವಿದೇಶಗಳಿಂದ ಸಾವಿರಾರು ಜನ ಆಗಮಿಸುತಿದ್ದು, ತಮ್ಮ ಉತ್ಪನ್ನಗಳ, ಕಂಪನಿ, ಕೈಗಾರಿಕೆಗಳನ್ನು, ಜನರ ಬಳಿ ಕೊಂಡೊಯ್ಯಲು ಉತ್ತಮ ವೇದಿಕೆ ಇದಾಗಿದೆ ಹಾಗೂ ವಿಜೃಂಭಣೆಯ ದಸರಾದಲ್ಲಿ ಪಾಲುದಾರರಾದ ಕೀರ್ತಿ ನಿಮ್ಮದಾಗಲಿದೆ ಎಂದರು.

ಪ್ರಾಯೋಜಕತ್ವದಲ್ಲಿ ಜಂಬೂಸವಾರಿ, ಅಂಬಾರಿ, ಪ್ಲಾಟಿನಂ, ಗೋಲ್ಡನ್, ಸಿಲ್ವರ್ ಎಂಬ ವಿಧಗಳಿದ್ದು ತಾವು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಅದಲ್ಲದೆ ವಿವಿಧ ಕಾರ್ಯಕ್ರಮಗಳಲ್ಲಿ ಸ್ಥಳಾವಕಾಶದ ಅವಕಾಶಗಳಿದ್ದು ಬಳಸಿಕೊಳ್ಳಿ , ಇದರಲ್ಲಿ ಯಾವುದೇ ಒತ್ತಾಯವಲ್ಲ, ಸ್ವಯಂಪ್ರೇರಿತವಾಗಿ ಮುಂದೆ ಬನ್ನಿ ಎಂದರು.

ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಅಂದು ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಈ ಮಾನವ ಸರಪಳಿಯಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ತಾವು ಈ ಹಿಂದೆಯೂ ಸಂಪೂರ್ಣ ಸಹಕಾರ ನೀಡಿದ್ದೀರಿ, ಈ ಬಾರಿಯೂ ಸಹಕಾರ ಬಯಸುತ್ತೇವೆ. ತಮಗೆ ಅನುಕೂಲವಾಗುವಂತಹ ಪ್ರಾಯೋಜಕತ್ವವನ್ನು ತಾವು ಉಪಯೋಗಿಸಿಕೊಳ್ಳಬಹುದಾಗಿದ್ದು, ತಕ್ಷಣಕ್ಕೆ ತಿಳಿಸಲಾಗದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಯೂ ತಿಳಿಸಬಹುದಾಗಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕರಾದ ಸವಿತ ಮಾತನಾಡಿ, ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಗಳಲ್ಲಿ, ಪ್ರವೇಶ ದ್ವಾರಗಳಲ್ಲಿ, ವಿವಿಧ ಸ್ಟಾಲ್ ಗಳಲ್ಲಿ ಹಾಗೂ ಯುವ ದಸರ, ಯುವ ಸಂಭ್ರಮ, ಆಹಾರ ಮೇಳ, ಪ್ಲವರ್ ಶೋ, ಕುಸ್ತಿ ಇನ್ನು ಮುಂತಾದ ವೇದಿಕೆಗಳಲ್ಲಿ ತಮ್ಮ ಜಾಹೀರಾತುಗಳನ್ನು ಹಾಕುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದರು.

ಜಂಬೂ ಸವಾರಿ ಪ್ರಾಯೋಜಕತ್ವದಲ್ಲಿ 2 ಕೋಟಿ, ಅಂಬಾರಿ ಪ್ರಾಯೋಜಕತ್ವದಲ್ಲಿ 1 ಕೋಟಿ, ಪ್ಲಾಟಿನಂ ಪ್ರಾಯೋಜಕತ್ವದಲ್ಲಿ 75 ಲಕ್ಷ, ಗೋಲ್ಡನ್ ಪ್ರಾಯೋಜಕತ್ವದಲ್ಲಿ 50 ಲಕ್ಷ, ಸಿಲ್ವರ್ ಪ್ರಾಯೋಜಕತ್ವದಲ್ಲಿ 25 ಲಕ್ಷ ಸ್ಪಾನ್ಸರ್ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಪೊಲೀಸ್ ಕಮಿಷನರ್ ಸೀಮಾಲಾಟ್ಕರ್, ಸಿಇಒ ಗಾಯತ್ರಿ ಕೆ.ಎಂ. ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಸೇರಿದಂತೆ ಉದ್ಯಮಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago