ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಕೂಟಗಳಿಂದ ವಿದ್ಯಾರ್ಥಿಗಳ ನಡುವೆ ಸಹೋದರ ಸಂಬಂಧ ಬೆಳೆಯಲಿವೆ. ಕ್ರೀಡೆಯ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುರೂಡಿಸಿಕೊಳ್ಳಬೇಕು. ಯಾವ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುತ್ತಾನೋ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾನೆ ಎಂದರು.
ಸಮಾರಂಭದಲ್ಲಿ ಬರಡನಪುರ ಮಠದ ಶ್ರೀ ಪರಶಿವಮೂರ್ತಿ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ನಾಗರಾಜು, ವೀರಶೈವ ಮುಖಂಡರಾದ ಹಿನ್ಕಲ್ ಬಸವರಾಜು, ಮುಖಂಡರುಗಳಾದ ಎಂ.ಕುಮಾರ್, ನಂದೀಶ್ ಚಾಮುಂಡಯ್ಯ, ಲಾಯರ್ ಮಹೇಶ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…