ಮೈಸೂರು

ಕ್ರೀಡೆ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಪ್ರಪಂಚದಲ್ಲಿ ಕ್ರೀಡೆಯು ಮಹತ್ವದ ಸ್ಥಾನ ಪಡೆದಿದ್ದು, ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ ಕ್ಷೇತ್ರವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಸರಾ ಕ್ರೀಡಾ ಉಪಸಮಿತಿ ವತಿಯಿಂದ ಶನಿವಾರ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ದಸರಾ ಕ್ರೀಡಾಕೂಡ ಮತ್ತು ಸಿಎಂ ಕಪ್-2023 ಕ್ರೀಡೆಯ ವಿಜೇತರಿಗೆ ಬಹುಮಾನ ವಿತರಿಸಿ ಸಚಿವರು ಮಾತನಾಡಿದರು.

ಕ್ರೀಡೆಯು ಮನುಷ್ಯನ ಭಾವನೆಗಳನ್ನು ಕ್ಷಣಾರ್ಧದಲ್ಲಿ ಬದಲಿಸುವ ಶಕ್ತಿ ಹೊಂದಿದೆ. ಬಹುಮುಖ್ಯವಾಗಿ ಕ್ರೀಡೆಗೆ ಕಠಿಣವಾದ ಪರಿಶ್ರಮ ಅಗತ್ಯ. ಅದಕ್ಕೆ ಉತ್ತೇಜನ ಮತ್ತು ಪ್ರೋತ್ಸಾಹ ಹಾಗೂ ಅಗತ್ಯ ಸವಲತ್ತುಗಳನ್ನು ನೀಡಿದಾಗ ಉತ್ತಮ ಕ್ರೀಡಾಪಟುಗಳು ರೂಪುಗೊಳ್ಳುತ್ತಾರೆ. ಈ ಎಲ್ಲಾ ಸೌಕರ್ಯವನ್ನು ಸರ್ಕಾರ ಒದಗಿಸಿಕೊಡಲಿದೆ ಎಂದು ಭರವಸೆ ನೀಡಿದರು.

ಮೈಸೂರು ದಸರಾ ಮಹೋತ್ಸವಲ್ಲಿ ಪ್ರಮುಖವಾಗಿ ಕಳೆಗಟ್ಟುವ ವೇದಿಕೆ ದಸರಾ ಕ್ರೀಡಾಕೂಟವಾಗಿದೆ. ಈ ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಸರ್ಕಾರ ಅಭಿನಂದಿಸುತ್ತದೆ. ಈ ಎಲ್ಲರೂ ಕೂಡ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡೆಯಲ್ಲಿ ಭಾಗವಹಿಸಿ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಸೌಹರ್ದತೆ, ಅಖಂಡತೆ ಮತ್ತು ಬಹುತ್ವವನ್ನು ರಕ್ಷಣೆ ಮಾಡುವುದು ನಿಮ್ಮ ಜವಬ್ದಾರಿ ಎಂದು ತಿಳಿಸಿದರು.

ದಸರಾ ಕ್ರೀಡಾಕೂಟದಲ್ಲಿ ಹತ್ತು ಸಾವಿರ ಕ್ರೀಡಾಪಟುಗಳು ಭಾಗವಹಿಸಿ, ಕ್ರೀಡಾಂಗದಲ್ಲಿ ಅತ್ಯುತ್ತಮವಾದ ಪ್ರದರ್ಶನ ನೀಡಿದ್ದಾರೆ. ಸೋಲು, ಗೆಲುವಿನ ಲೆಕ್ಕಚಾರ ಹಾಕದೆ ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಮುಖ್ಯ. ಕ್ರೀಡೆಯಲ್ಲಿ ಸಾಧನೆ ಮಾಡಿದಂತಹ ಸಾಧಕರ ಗುರಿ ನಿಮ್ಮದಾಗಬೇಕು. ಸೋಲೇ ಗೆಲುವಿನ ಸೋಪಾನ ಎಂದು ಭಾವಿಸಿ ಮರಳಿ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಭಾರತದ ಭೂಪಟದಲ್ಲಿ ಅಚ್ಚಳಿಯದೆ ಮೈಸೂರು ಸಾಂಸ್ಕೃತಿಕ ನಗರದ ಎಂಬ ಹೆಗ್ಗಳಿಕೆ ಉಳಿಯಬೇಕಾದರೆ ನಾಲ್ವಡಿ ಕೃಷ್ಣರಾಜ ಒಡೆಯರ ಮುತ್ಸದ್ಧಿತನ, ಸೂಕ್ಷ್ಮತೆ, ದೂರದೃಷ್ಟಿ ಮುಖ್ಯಕಾರಣ. ಅವರು ಬೆಂಬಲಿಸದ ಯಾವುದೇ ಕ್ಷೇತ್ರ ಉಳಿದಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಶಾಸಕ ತನ್ವೀರ್ ಸೇಠ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ಒಲಂಪಿಕ್ ಸಂಸ್ಥೆಯ ಕಾರ್ಯದರ್ಶಿ ಆನಂತ್ ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್.ಶಶಿಕುಮಾರ್, ಉಪಸಮಿತಿ ಅಧ್ಯಕ್ಷ ಶಿವಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

andolanait

Recent Posts

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

40 mins ago

ರೈಲು ಪ್ರಯಾಣ ದರ ಹೆಚ್ಚಳ : ಫೆ.1ರಿಂದ ಪರಿಷ್ಕೃತ ದರ ಜಾರಿ

ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…

44 mins ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

50 mins ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

52 mins ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

1 hour ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

2 hours ago