ಕ್ರೀಡೆ ಆರೋಗ್ಯದ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡುತ್ತದೆ: ಸುನೀಲ್ ಬೋಸ್‌

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಪಿಎಲ್ ಮಾದರಿಯಲ್ಲಿ ಭಗೀರಥ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಆಯೋಜನೆ ಮಾಡುವ ಮೂಲಕ ಚಾಮರಾಜನಗರ ಯುವಕರು ಮಾದರಿಯಾಗಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕ್ರಿಕೆಟ್ ಹಬ್ಬವು ಎಲ್ಲರಿಗೂ ಸಂತೋಷನ್ನು ಉಂಟು ಮಾಡಲಿ ಎಂದರು.

ಕ್ರಿಕೆಟ್ ಪಂದ್ಯಾವಳಿಯು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಮರಾ ಅಳವಡಿಕೆ ಹಾಗೂ ಮೂರನೇ ಅಂಪೈರ್ ಸುಸಜ್ಜಿತ ಕ್ರಿಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆಯುವಂತೆ ಸುನೀಲ್ ಬೋಸ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್. ಲೋಕೇಶ್, ಜಿ.ಪಂ. ಮಾಜಿ ಸದಸ್ಯ ನಂಜನಗೂಡಿನ ಕೆ.ಬಿ.ಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಪರಿಸರ ಪ್ರೇಮಿ ವೆಂಕಟೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನಂದ್ ಭಗೀರಥ್, ದ್ವಾರಕಿ ಬಸವಣ್ಣ, ಸಂಘದ ಅಧ್ಯಕ್ಷ ರಾಜೇಂದ್ರ, ಭರತ್ ಮೊದಲಾದವರು ಇದ್ದರು.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

4 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

5 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

6 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

6 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

6 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

6 hours ago