ಕ್ರೀಡೆ ಆರೋಗ್ಯದ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡುತ್ತದೆ: ಸುನೀಲ್ ಬೋಸ್‌

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಪಿಎಲ್ ಮಾದರಿಯಲ್ಲಿ ಭಗೀರಥ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಆಯೋಜನೆ ಮಾಡುವ ಮೂಲಕ ಚಾಮರಾಜನಗರ ಯುವಕರು ಮಾದರಿಯಾಗಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕ್ರಿಕೆಟ್ ಹಬ್ಬವು ಎಲ್ಲರಿಗೂ ಸಂತೋಷನ್ನು ಉಂಟು ಮಾಡಲಿ ಎಂದರು.

ಕ್ರಿಕೆಟ್ ಪಂದ್ಯಾವಳಿಯು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಮರಾ ಅಳವಡಿಕೆ ಹಾಗೂ ಮೂರನೇ ಅಂಪೈರ್ ಸುಸಜ್ಜಿತ ಕ್ರಿಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆಯುವಂತೆ ಸುನೀಲ್ ಬೋಸ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್. ಲೋಕೇಶ್, ಜಿ.ಪಂ. ಮಾಜಿ ಸದಸ್ಯ ನಂಜನಗೂಡಿನ ಕೆ.ಬಿ.ಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಪರಿಸರ ಪ್ರೇಮಿ ವೆಂಕಟೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನಂದ್ ಭಗೀರಥ್, ದ್ವಾರಕಿ ಬಸವಣ್ಣ, ಸಂಘದ ಅಧ್ಯಕ್ಷ ರಾಜೇಂದ್ರ, ಭರತ್ ಮೊದಲಾದವರು ಇದ್ದರು.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

33 mins ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

3 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

4 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

6 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

11 hours ago