ಕ್ರೀಡೆ ಆರೋಗ್ಯದ ಜೊತೆಗೆ ಮನಸ್ಸಿಗೆ ಉಲ್ಲಾಸ ನೀಡುತ್ತದೆ: ಸುನೀಲ್ ಬೋಸ್‌

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಐಪಿಎಲ್ ಮಾದರಿಯಲ್ಲಿ ಭಗೀರಥ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಆಯೋಜನೆ ಮಾಡುವ ಮೂಲಕ ಚಾಮರಾಜನಗರ ಯುವಕರು ಮಾದರಿಯಾಗಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಕ್ರಿಕೆಟ್ ಹಬ್ಬವು ಎಲ್ಲರಿಗೂ ಸಂತೋಷನ್ನು ಉಂಟು ಮಾಡಲಿ ಎಂದರು.

ಕ್ರಿಕೆಟ್ ಪಂದ್ಯಾವಳಿಯು ಬಹಳ ಅಚ್ಚುಕಟ್ಟಾಗಿ ನಡೆಯುತ್ತಿದೆ. ಕ್ಯಾಮರಾ ಅಳವಡಿಕೆ ಹಾಗೂ ಮೂರನೇ ಅಂಪೈರ್ ಸುಸಜ್ಜಿತ ಕ್ರಿಡಾಂಗಣದಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸಿ, ಕ್ರೀಡಾ ಸ್ಪೂರ್ತಿಯನ್ನು ಮೆರೆಯುವಂತೆ ಸುನೀಲ್ ಬೋಸ್ ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎನ್. ಲೋಕೇಶ್, ಜಿ.ಪಂ. ಮಾಜಿ ಸದಸ್ಯ ನಂಜನಗೂಡಿನ ಕೆ.ಬಿ.ಸ್ವಾಮಿ, ಜಿ.ಪಂ. ಮಾಜಿ ಅಧ್ಯಕ್ಷ ಸಿ.ಎ.ಮಹದೇವಶೆಟ್ಟಿ, ಪರಿಸರ ಪ್ರೇಮಿ ವೆಂಕಟೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅನಂದ್ ಭಗೀರಥ್, ದ್ವಾರಕಿ ಬಸವಣ್ಣ, ಸಂಘದ ಅಧ್ಯಕ್ಷ ರಾಜೇಂದ್ರ, ಭರತ್ ಮೊದಲಾದವರು ಇದ್ದರು.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago