ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ದೇವನೂರು ಮಠದಲ್ಲಿ ಶ್ರೀ ಶ್ರೀ ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಹಸಿದು ಬಂದ ಸಾವಿರಾರು ಜನರಿಗೆ ಅನ್ನದಾಸೋಹ ಮಾಡಿ, ಇತಿಹಾಸ ಪ್ರಸಿದ್ಧವಾಗಿರುವ ದೇವನೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ ಮಠದಲ್ಲಿ ಇಂದು( ಜೂನ್ 23 ) ಮತ್ತು ನಾಳೆ ( ಜೂನ್ 24 ) ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವ ನೆರವೇರಲಿದೆ.
ಆರಾಧನಾ ಮಹೋತ್ಸವದ ಅಂಗವಾಗಿ ದೇವನೂರು ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಮಧುವಣಗಿತ್ತಿಯಂತೆ ಶೃಂಗರಿಸಲಾಗಿದೆ.
ಇನ್ನು ಆರಾಧನೆಯ ಅಂಗವಾಗಿ ಗುರುಮಲ್ಲೇಶ್ವರರ ಮಠವನ್ನು ಸಹ ವಿವಿಧ ಹೂ ಹಾಗೂ ಹಣ್ಣುಗಳಿಂದ ಅಲಂಕಾರ ಮಾಡಿ ಶೃಂಗರಿಸಲಾಗಿದ್ದು, ಸಾವಿರಾರು ಮಂದಿ ಭಕ್ತರಿಂದಲೇ ಮಠವನ್ನು ಶೃಂಗರಿಸಲಾಗಿದೆ ಎಂದು ಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರಾಧನಾ ಮಹೋತ್ಸವದ ಪ್ರಯುಕ್ತ ಸಾವಿರಾರು ಮಂದಿ ಮಠಕ್ಕೆ ಭೇಟಿ ನೀಡಿ, ಶ್ರೀ ಗುರುಮಲ್ಲೇಶ್ವರರ ಗದ್ದುಗೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಪ್ರಸಾದ ವಿತರಣೆಯನ್ನು ಸಹ ಮಾಡಲಾಗಿದೆ.
ಹೈದರಾಬಾದ್ : ಅಮೆರಿಕ-ಇರಾನ್ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…
ಶುಭಾ ಖಟಾವಕರ ಮ್ಹೆತ್ರಸ್ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…
ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…
ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…
ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…
ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…