ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ದೇವನೂರು ಮಠದಲ್ಲಿ ಶ್ರೀ ಶ್ರೀ ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದೆ.
ಹಸಿದು ಬಂದ ಸಾವಿರಾರು ಜನರಿಗೆ ಅನ್ನದಾಸೋಹ ಮಾಡಿ, ಇತಿಹಾಸ ಪ್ರಸಿದ್ಧವಾಗಿರುವ ದೇವನೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ ಮಠದಲ್ಲಿ ಇಂದು( ಜೂನ್ 23 ) ಮತ್ತು ನಾಳೆ ( ಜೂನ್ 24 ) ಗುರುಮಲ್ಲೇಶ್ವರರ 125ನೇ ಆರಾಧನಾ ಮಹೋತ್ಸವ ನೆರವೇರಲಿದೆ.
ಆರಾಧನಾ ಮಹೋತ್ಸವದ ಅಂಗವಾಗಿ ದೇವನೂರು ಗ್ರಾಮವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಮಧುವಣಗಿತ್ತಿಯಂತೆ ಶೃಂಗರಿಸಲಾಗಿದೆ.
ಇನ್ನು ಆರಾಧನೆಯ ಅಂಗವಾಗಿ ಗುರುಮಲ್ಲೇಶ್ವರರ ಮಠವನ್ನು ಸಹ ವಿವಿಧ ಹೂ ಹಾಗೂ ಹಣ್ಣುಗಳಿಂದ ಅಲಂಕಾರ ಮಾಡಿ ಶೃಂಗರಿಸಲಾಗಿದ್ದು, ಸಾವಿರಾರು ಮಂದಿ ಭಕ್ತರಿಂದಲೇ ಮಠವನ್ನು ಶೃಂಗರಿಸಲಾಗಿದೆ ಎಂದು ಮಠದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರಾಧನಾ ಮಹೋತ್ಸವದ ಪ್ರಯುಕ್ತ ಸಾವಿರಾರು ಮಂದಿ ಮಠಕ್ಕೆ ಭೇಟಿ ನೀಡಿ, ಶ್ರೀ ಗುರುಮಲ್ಲೇಶ್ವರರ ಗದ್ದುಗೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ಪ್ರಸಾದ ವಿತರಣೆಯನ್ನು ಸಹ ಮಾಡಲಾಗಿದೆ.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…