ಮೈಸೂರು

ಮಾನವೀಯ ಮೌಲ್ಯ, ವಿಶಿಷ್ಟಾದ್ವೈತದ ಅನನ್ಯತೆಯನ್ನು ಜನತೆಗೆ ಸಾರಿದ ಮಹಾನ್ ವ್ಯಕ್ತಿ ಶ್ರೀರಾಮಾನುಜಾಚಾರ್ಯ- ಕುಲಪತಿ ಲೋಕನಾಥ್ ಅಭಿಮತ

ಮೈಸೂರು: ಆಧ್ಯಾತ್ಮ, ಮಾನವೀಯ ಮೌಲ್ಯಗಳು, ಸಾಮಾಜಿಕ ಸಮಾನತೆ, ವಿಶಿಷ್ಟಾದ್ವೈತದ ಅನನ್ಯತೆಯನ್ನು ಜನತೆಗೆ ಸಾರಿದ ಮಹಾನ್ ವ್ಯಕ್ತಿ ಶ್ರೀರಾಮಾನುಜಾಚಾರ್ಯರು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎನ್.ಕೆ ಲೋಕನಾಥ್ ಅಭಿಪ್ರಾಯಪಟ್ಟರು.

ಬುಧವಾರ(ಆ.7) ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದ ವತಿಯಿಂದ ಮಾನಸಗಂಗೋತ್ರಿಯ ವಿಜ್ಞಾನ ಭವನದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ “ವಿಶಿಷ್ಟಾದ್ವೈತದ – ನಯಚಿಂತನಮ್” ಎಂಬ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ವೇದಾಂತಶಾಸ್ತ್ರ ಪ್ರಪಂಚಕ್ಕೆ ವಿಶಿಷ್ಟವಾದ ಕೊಡುಗೆಗಳನ್ನು ನೀಡಿದ ಮಾಹಾನಿಯರಾದ ರಾಮಾನುಜಾಚಾರ್ಯರು, ಮಧ್ವಾಚಾರ್ಯರು ಹಾಗೂ ಶಂಕರಚಾರ್ಯರ ವಿಚಾರ ಲಹರಿಗಳನ್ನು ಜನ ಸಾಮಾನ್ಯರಿಗೂ ತಿಳಿಸುವ ಕೆಲಸ ಮಾಡಬೇಕು ಎಂದರು.

ಶ್ರೀರಾಮಾನುಜಾಚಾರ್ಯರು ಶಾಸ್ತ್ರಾಭ್ಯಾಸಗಳನ್ನು ಅನುಸರಿಸಿ ಜನರಲ್ಲಿ ವೈಷ್ಣವ ಭಕ್ತಿಯ ಬೀಜವನ್ನು ಬಿತ್ತಿದರು. ತಮ್ಮ ವಿಶಿಷ್ಟಾದ್ವೈತ ಸಿದ್ಧಾಂತ ಪ್ರವರ್ತಕರಾಗಿ ಮಹಾ ವಿಷ್ಣುವಿನ ಆರಾಧಕರಾಗಿ ವಿಶಿಷ್ಟಾದ್ವೈತ ಸಿದ್ಧಾಂತವನ್ನ ಹಿಮಾಲಯದೆತ್ತರಕ್ಕೆ ಬೆಳೆಸಿದರು. ವಿಷ್ಣುವಿನಲ್ಲಿ ಭಕ್ತಿ ಇಟ್ಟರೆ ಪರಮಾತ್ಮನನ್ನು ಒಲಿಸಿಕೊಳ್ಳಬಹುದು ಎಂಬುದನ್ನು ತಿಳಿಸಿಕೊಟ್ಟರು ಎಂದು ತಿಳಿಸಿದರು.

ವಿಷ್ಣುವಿನ ಭಕ್ತಿಯಲ್ಲಿ ಯಾವುದೇ ತಾರತಮ್ಯವಿಲ್ಲ. ಪಂಡಿತ ಪಾಮರರಿಗೆ ಭೇದವಿಲ್ಲ ಎಂದು ನಿರೂಪಿಸಿದ ವಿಶಿಷ್ಟ ಪ್ರಮೇಯವನ್ನು ಮಂಡಿಸಿದ ರಾಮಾನುಜಾಚಾರ್ಯರಲ್ಲಿ ಪ್ರತಿಭೆ ಹಾಗೂ ವೈಶಾಲತೆಯನ್ನು ಕಾಣಬಹುದು. ವಿಶಿಷ್ಟಾದ್ವೈತ ಸಿದ್ಧಾಂತವನ್ನು ಅನುಸರಿಸುವ ಹಾಗೂ ಅಳವಡಿಸಿಕೊಳ್ಳುವ ಒಂದು ದೊಡ್ಡ ಪಂಗಡ ಇಂದಿಗೂ ಇದೆ. ಇದಕ್ಕೆಲ್ಲ ಮುಖ್ಯ ಕಾರಣ ನಮ್ಮ ಸಂಸ್ಕೃತ ಭಾಷೆ. ನಮ್ಮ ಸಂಸ್ಕೃತದ ಭಾಷೆಯಲ್ಲಿ ಇವೆಲ್ಲವೂ ಸಹ ಅಡಗಿದೆ. ನಮ್ಮ ಜಲ, ನೆಲ ಭಾಷೆ ಈ ಮೂರಕ್ಕೂ ಸಹ ನಾವು ಬಹಳ ಪ್ರಾಮುಖ್ಯತೆಯನ್ನು ನೀಡಬೇಕು ಎಂದರು.

ಪ್ರಸ್ತುತ ಪ್ರಚಲಿತದಲ್ಲಿರುವ ಎಲ್ಲಾ ರೀತಿಯ ತಾಂತ್ರಿಕ ಕೌಶಲ್ಯಗಳನ್ನು ಆ ಕಾಲದಲ್ಲಿಯೇ ಸಂಸ್ಕೃತ ಭಾಷೆ ಒಳಗೊಂಡಿತ್ತು. ಸಂಸ್ಕೃತ ಭಾಷೆಯಲ್ಲಿ ಹೆಚ್ಚು ಸಂಶೋಧನೆಗಳು ಜರುಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಸಹ ಕೈಜೋಡಿಸಬೇಕು. ರಾಮಾನುಜಾಚಾರ್ಯರ ವಿಶಿಷ್ಟಾದ್ವೈತ ಸಿದ್ಧಾಂತದ ಸೂಕ್ಷ್ಮ ವಿಷಯಗಳನ್ನು ಹಾಗೂ ಸಂಸ್ಕೃತ ಭಾಷೆಯನ್ನು ಜನಸಾಮಾನ್ಯರಿಗೂ ತಿಳಿಸಬೇಕು ಆ ಮೂಲಕ ವಿಚಾರ ಸಂಕಿರಣವನ್ನು ಯಶಸ್ವಿಗೊಳಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸತ್‌ನ ಕುಲ ಸಚಿವರಾದ ಡಾ.ಎಸ್. ಕುಮಾರ್, ವಿದ್ವತ್ ಪರಂಪರೆಯಲ್ಲಿ ಬೆಳೆದಂತಹ ಭಗವಾನ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸ್ಥೆಯು ತನ್ನ 50 ನೇ ವರ್ಷದ ಸಂಭ್ರಮಾಚರಣೆಯ ಆಸುಪಾಸಿನಲ್ಲಿದೆ. ಇದರ ಮೂಲ ಉದ್ದೇಶ ಶ್ರೀಭಗವಾನ್ ರಾಮಾನುಜಾಚಾರ್ಯರ ಸಿದ್ದಾಂತಗಳನ್ನು ಸಂಶೋಧನೆ ಮಾಡುವ ಮೂಲಕ ಸಂಸ್ಕೃತದ ಬಳಕೆಯನ್ನು ಮುಂದೆ ತರುವುದಾಗಿದೆ ಎಂದರು.

ರಾಮಾನುಜರ ಉಜ್ವಲ ವ್ಯಕ್ತಿತ್ವ, ಬುದ್ದಿ ತೀಕ್ಷ್ಣತೆ, ಅದ್ಭುತ ಗ್ರಂಥರಚನಾ ಸಾಮರ್ಥ್ಯ, ಅಸದೃಶ್ಯ ಪಾಂಡಿತ್ಯ, ಕಾರ್ಯತತ್ಪರತೆ, ಕಾರುಣ್ಯ, ಪರಿಶುದ್ಧ ಜೀವನ, ತೀರ್ಥಯಾತ್ರೆ, ದೇವಾಲಯ ಪುನರುದ್ಧಾರ ಇತ್ಯಾದಿ ಗುಣಗಳೆಲ್ಲ ಇವರ ಸಿದ್ಧಾಂತ ಸ್ಥಾಪನೆಗೂ, ವಿಸ್ತಾರ ಪ್ರಚಾರಕ್ಕೂ ಸಹಾಯಕವಾದವು. ಹಿಂದಿನ ಸಂಪ್ರದಾಯವನ್ನು ಸಿದ್ಧಾಂತ ಮಟ್ಟಕ್ಕೆ ಏರಿಸಿ, ಅದಕ್ಕೆ ಗಣ್ಯವಾದ ವೈಷ್ಣವ ದರ್ಶನ ಸ್ಥಾನವನ್ನು ಸಂಪಾದಿಸಿದ ಕೀರ್ತಿ ರಾಮಾನುಜರಿಗೆ ಸಲ್ಲುತ್ತದೆ ಎಂದರು.

ರಾಮಾನುಜಾಚಾರ್ಯರ ಸಿದ್ಧಾಂತಗಳು, ವಿಚಾರ ಲಹರಿಗಳು, ವೇದಾಂತ ದರ್ಶನ, ಅವರ ಗ್ರಂಥಗಳಿಗೆ ಸಂಬoಧಿಸಿದoತೆ ಸಾಮಾಜಿಕ ಚಿಂತನೆ, ಸಿದ್ಧಾಂತಗಳ ಕೊಡುಗೆಗಳನ್ನು ಮೇಲುಕೋಟೆ ಸುತ್ತಮತ್ತಲೂ ಪ್ರಚಾರ ಮಾಡುವುದರ ಜೊತೆಗೆ ರಾಷ್ಟ್ರದಾದ್ಯಂತ ಪ್ರಚಾರ ಮಾಡಬೇಕು. ಈ ನಿಟ್ಟಿನಲ್ಲಿ ರಾಮಾನುಜರ ವಿಚಾರ ಸಂಕಿರಣ ಉಪನ್ಯಾಸಗಳನ್ನು ಆನ್‌ಲೈನ್ ಮೂಲಕ ಆಯೋಜಿಸಲಾಗಿದೆ ಎಂದರು.

ಪ್ರಾಚ್ಯವಿದ್ಯಾ ಸಂಶೋಧನಾಲಯವು ಅನೇಕ ಸಂಸ್ಕೃತ ತಾಳೆಗರಿಗಳ ಸಂಶೋಧನೆಗೆ ಅನುವು ಮಾಡಿಕೊಡುತ್ತಿದೆ. ಈಗಾಗಲೇ ಸಂಸ್ಕೃತ ಭಾಷೆ ಬೆಳೆದು ಅಳಿವಿನ ಅಂಚಿನಲ್ಲಿದೆ. ಸಂಸ್ಕೃತದಲ್ಲಿರುವ ಶಾಸ್ತ್ರ, ಧರ್ಮ, ಗ್ರಂಥ ವ್ಯಾಸಂಗಗಳನ್ನು ಸಾಮಾನ್ಯ ಜನರಿಗೂ ಕೂಡ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕರಾದ ಡಾ.ಡಿ.ಪಿ ಮಧುಸೂಧನಾಚಾರ್ಯ, ಮೈಸೂರಿನ ಶ್ರೀಮನ್ಮಹಾರಾಜ ಸಂಸ್ಕೃತ ಮಹಾಪಾಠ ಶಾಲೆಯ ಪ್ರಾಂಶುಪಾಲರಾದ ಡಾ. ಬಿ ಸತ್ಯನಾರಾಯಣ, ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ಉಪನಿರ್ದೇಶಕರಾದ ವಿದ್ವಾನ್ ಡಾ.ಟಿ.ವಿ ಸತ್ಯನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago