ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು.
ಇಂದು (ಮೇ.೧೨)ನಗರದ ರೋಟರಿ ಪಶ್ಚಿಮ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಶಾತ್ತಾದ ಶ್ರೀ ವೈಷ್ಣವ ಸಂಘದ ವತಿಯಿಂದ ಆಯೋಜಿಸಿದ್ದ ಭಗವದ್ ಶ್ರೀ ರಾವಾನುಜಾಚಾರ್ಯ ೧೦೦೭ನೇ ತಿರು ನಕ್ಷತ್ರ ಹಾಗೂ ೧೫ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ರಾಮಾನುಜಾಚಾರ್ಯ ಕೊಡುಗೆ ನಾಡಿಗೆ ಅಪಾರವಾಗಿದೆ. ಅವರು ಭೋದಿಸಿದ ವಿಶಿಷ್ಟದ್ವೈತ ಸಿದ್ಧಾಂತವು ಭಾರತದಲ್ಲಿ ಇಂದಿಗೂ ಆಧ್ಯಾತ್ಮಿಕ ಮಾರ್ಗವಾಗಿ ಪ್ರಕಾಶಿಸುತ್ತಿದೆ ಎಂದು ತಿಳಿಸಿದರು.
ವಿಷ್ಣುವಿನ ಆರಾಧಾಕರಾಗಿದ್ದ ರಾಮಾನುಜಾಜಾರ್ಯರನ್ನು ಗುರು, ದಾರ್ಶನಿಕ ಮತ್ತು ಸಮಾಜ ಸುಧಾರಕ ಎಂದು ಇಂದಿಗೂ ಪೂಜಿಸಲಾಗುತ್ತಿದೆ ಎಂದರು.
ಮೈಸೂರು ಜಿಲ್ಲಾ ಶಾತ್ತಾದ ಶ್ರೀ ವೈಷ್ಣವ ಸಂಘದ ಅಧ್ಯಕ್ಷ ನರಸಿಂಹಯ್ಯ, ಉಪಾಧ್ಯಕ್ಷ ಕೆ.ಎನ್.ಸಂಪತ್ ಕುಮಾರ್, ಕಾರ್ಯದರ್ಶಿ ಪುಟ್ಟಸ್ವಾಮಿ, ಸಹ ಕಾರ್ಯದರ್ಶಿ ನಾರಾಯಣ್ ಜಿಯರ್, ಖಜಾಂಚಿ ಪಾಲಾಕ್ಷ, ಸಹ ಕಾರ್ಯದರ್ಶಿ ಎಚ್.ಎಸ್.ಪ್ರೇಮ್ ಕುವಾರ್ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…