ಮೈಸೂರು : ನಾನು ಕಂಡ ಪ್ರಭಾವಿ ನಾಯಕ, ಸ್ವಾಭಿಮಾನಿ ರಾಜಕಾರಣಿ ಶ್ರೀನಿವಾಸ ಪ್ರಸಾದ್ ನಮ್ಮ ನಡುವೆ ಬೌದ್ಧಿಕವಾಗಿ ಇಲ್ಲದಿದ್ದರೂ, ಅವರ ಸೈದ್ಧಾಂತಿಕ ನಿಷ್ಠೆ ಹಾಗೂ ಸಾಧನೆಗಳು ಅವರ ಸಾರ್ಥಕ ಜೀವನಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್ ಆವರಣದಲ್ಲಿ ಏರ್ಪಡಿಸಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇವಲ ದಲಿತ ವರ್ಗಕ್ಕೆ ಸೀಮಿತರಾಗದೇ ಎಲ್ಲಾ ವರ್ಗದ ನಾಯಕರಾಗಿದ್ದವರು ಶ್ರೀನಿವಾಸ ಪ್ರಸಾದ್ ಎಂದು ತಿಳಿಸಿದರು.
ಪ್ರಸಾದ್ ಎಲ್ಲಾ ವರ್ಗದವರಿಗೂ ನಾಯಕರಾಗಿದ್ದರು ಎಂಬುದಕ್ಕೆ ಭೂಮಿ, ಮನಸ್ವಿನಿ ಅಂತಹ ಜನಪರ ಯೋಜನೆಗಳನ್ನು ನೀಡಿದ್ದೇ ಸಾಕ್ಷಿ. ಜನಾನುರಾಗಿ ನಾಯಕರಾಗಿ, ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದವರು ಪ್ರಸಾದ್ ಎಂದು ಅಭಿಪ್ರಾಯಪಟ್ಟರು.
ನಮ್ಮ ರಾಜಕೀಯ ನಿಲುವುಗಳು ಏನೇ ಇರಲಿ, ಅವರ ಹಿರಿತನ ಹಾಗೂ ಅವರ ಬದ್ದತೆಗಳಿಗೆ ಎಂದೂ ಕೊರತೆ ಇರಲಿಲ್ಲ. ಆದರೆ ಏಪ್ರಿಲ್ 29ರಂದು ಅವರ ಸಾಧಕ ಜೀವನ ಅಂತ್ಯವಾಗಿದ್ದು ದುಖಃದ ವಿಚಾರ ಎಂದರು.
ತಮ್ಮ ಸುದೀರ್ಘ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿದ ಹಿನ್ನಲೆಯಲ್ಲಿ, ಕಳೆದ ಮಾರ್ಚ್ 17ರಂದು ಸುವರ್ಣ ಮಹೋತ್ಸವ ಆಚರಿಸಿ ಚುನವಣಾ ರಾಜಕೀಯ ಹಾಗೂ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದರು. ಆದರೇ ತಮ್ಮ ಉಸಿರು ಇರುವವರೆಗೆ ತಮ್ಮ ಸ್ವಾಭಿಮಾನ ಹಾಗೂ ಸೈದ್ಧಾಂತಿಕ ನಿಲುವುಗಳನ್ನು ಕೈಬಿಡಲಿಲ್ಲ ಎಂದರು.
ಶೋಷಿತರ ಪರ ಧ್ವನಿಯಾಗಿ ಹೇಗಿರಬೇಕು ಎಂದು ಪ್ರಸಾದ್ ತಿಳಿಸಿಕೊಟ್ಟಿದ್ದಾರೆ. ಅವರ ರಾಜಕೀಯ ಜೀವ ಎಲ್ಲರಿಗೂ ಪ್ರೇರಣೆಯಾಗಿದೆ. ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದ್ದೇವೆ ಎಂದು ಯಡಿಯೂರಪ್ಪ ತಿಳಿಸಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…