ಮೈಸೂರು

ನಾನು ನೋಡಿದ ನಿಸ್ಪೃಹ ಮನಸ್ಸಿನ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ : ಪ್ರತಾಪ್‌ ಸಿಂಹ !

ಮೈಸೂರು :  ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್‌ ಮಾತ್ರ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.

ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್‌ ಎಂದರು.

ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್‌. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.

ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್‌ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್‌ ಸಿಂಹ ಗದ್ಗತಿತರಾದರು.

ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್‌ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್‌ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

12 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

31 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

44 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

58 mins ago