ಮೈಸೂರು : ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್ ಮಾತ್ರ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.
ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್ ಎಂದರು.
ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.
ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್ ಸಿಂಹ ಗದ್ಗತಿತರಾದರು.
ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…