ಮೈಸೂರು

ನಾನು ನೋಡಿದ ನಿಸ್ಪೃಹ ಮನಸ್ಸಿನ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ : ಪ್ರತಾಪ್‌ ಸಿಂಹ !

ಮೈಸೂರು :  ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್‌ ಮಾತ್ರ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.

ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್‌ ಎಂದರು.

ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್‌. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.

ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್‌ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್‌ ಸಿಂಹ ಗದ್ಗತಿತರಾದರು.

ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್‌ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್‌ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

44 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

50 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

54 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago