ಮೈಸೂರು : ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್ ಮಾತ್ರ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.
ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್ ಎಂದರು.
ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.
ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್ ಸಿಂಹ ಗದ್ಗತಿತರಾದರು.
ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…