ಮೈಸೂರು : ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್ ಮಾತ್ರ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.
ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್ ಎಂದರು.
ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.
ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್ ಸಿಂಹ ಗದ್ಗತಿತರಾದರು.
ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…