ಮೈಸೂರು

ನಾನು ನೋಡಿದ ನಿಸ್ಪೃಹ ಮನಸ್ಸಿನ ರಾಜಕಾರಣಿ ಶ್ರೀನಿವಾಸ ಪ್ರಸಾದ್‌ : ಪ್ರತಾಪ್‌ ಸಿಂಹ !

ಮೈಸೂರು :  ನಿಸ್ಪೃಹ ಮನಸ್ಸಿನ ರಾಜಕಾರಣಿಯೇನಾದರು ಇದ್ದರೆ ಅದು ಶ್ರೀನಿವಾಸ ಪ್ರಸಾದ್‌ ಮಾತ್ರ ಎಂದು ಸಂಸದ ಪ್ರತಾಪ್‌ ಸಿಂಹ ಅಭಿಪ್ರಯಾ ವ್ಯಕ್ತಪಡಿಸಿದರು.

ದಿವಂಗತ ಸಂಸದ ವಿ ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ೧೦ ವರ್ಷದ ನನ್ನ ರಾಜಕಾರಣದಲ್ಲಿ ಎಲ್ಲಾ ರೀತಿಯ ಎಲ್ಲಾ ವಿಧದ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಹಳೆ ಮೈಸೂರಿನ ನಿಶ್ಪೃಹ ಮನಸ್ಸಿನ ಏಕಮಾತ್ರ ವ್ಯಕ್ತಿ ಎಂದರೆ ಅದು ಶ್ರೀನಿವಾಸ ಪ್ರಸಾದ್‌ ಎಂದರು.

ಈ ಭಾಗದಲ್ಲಿ ದ್ವೇಷ-ಅಸೂಯೆ ಇಲ್ಲದಂತ ಒಬ್ಬನೇ ಒಬ್ಬ ರಾಜಕಾರಣೀ ಎಂದರೆ ಅದು ಶ್ರೀನಿವಾಸ ಪ್ರಸಾದ್‌. ನನಗೆ ವಯಕ್ತಿಕವಾಗಿ ನೋವಾಗಿದೆ. ಮೊದಲ ಬಾರಿ ಸಂಸದನಾಗಿದ್ದಾಗ ಅವರು ಮೈಸೂರಿನ ಉಸ್ತುವಾರಿ ಸಚಿವರಾಗಿದ್ದರು, ಪಕ್ಷ ಬೇರೆಯಾಗಿದ್ದರು ಒಂದು ದಿನ ನನ್ನನ್ನು ಬೇರೆಯವನಂತೆ ಕಂಡಿರಲಿಲ್ಲ ಎಂದರು.

ನಾನು ಸಂಸದನಾದ ಬಳಿಕ ಮೈಸೂರು ಭಾಗದಲ್ಲಿ ಒಂದು ದಿನಕ್ಕು-ಒಂದು ಕ್ಷಣಕ್ಕು ನನ್ನು ಟೀಕೆ ಮಾಡದಂತ ಮನಸ್ಸಿದ್ದರೆ ಅದು ಪ್ರಸಾದ್‌ ಸಾಹೇಬರು ಎಂದು ಹೇಳುವ ವೇಳೆ ಸಂಸದ ಪ್ರತಾಪ್‌ ಸಿಂಹ ಗದ್ಗತಿತರಾದರು.

ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ! : ಈತ್ತೀಚೆಗೆ ಮಾಜಿ ಸಂಸದರಾದ ಧೃವನಾರಾಯಣ್‌ ಅವರು ತೀರಿಹೋದರು. ಈಗ ಸಂಸದರಾದ ಶ್ರೀನಿವಾಸ ಪ್ರಸಾದ್‌ ತೀರಿಹೋಗಿದ್ದಾರೆ. ಯಾಕೋ ಈ ಮೈಸೂರು ಭಾಗದಲ್ಲಿ ಒಳ್ಳೆ ರಾಜಕಾರಣಿಗಳಿಗೆ ಕಾಲನೇ ಇಲ್ಲವೇನೋ ಎಂದು ಅನ್ನಿಸಿಬಿಡುತ್ತದೆ ಎಂದು ದುಖಿತರಾಗಿ ಭಾವುಕರಾದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago