ಮೈಸೂರು

ರಾಜಕೀಯ ಕ್ಷೇತ್ರದಲ್ಲಿ ಧೃವತಾರೆಯಾಗಿ ಸೇವೆ ಸಲ್ಲಿಸದವರು ಶ್ರೀನಿವಾಸ ಪ್ರಸಾದ್‌ : ಸುತ್ತೂರು ಶ್ರೀ

ಮೈಸೂರು : ಶೋಷಣೆಗಳ ವಿರುದ್ಧ ಯಾವುದೇ ಸಂಕೋಚವಿಲ್ಲದೆ ಧ್ವನಿ ಎತ್ತುತ್ತಿದ್ದ ಪರೂಪದ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್‌. ಅವರ ನಿಧನ ವಿಷಾದದ ಸಂಗತಿ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಶ್ರೀನಿವಾಸ ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀನಿವಾಸ ಪ್ರಸಾದ್‌ ಅವರ ಅಗಲಿಕೆ ವಿಷಾದದ ಸಂಗತಿ. ರಾಜಕೀಯ ಕ್ಷೇತ್ರದಲ್ಲಿ ಧೃವತಾರೆಯಾಗಿ ಸೇವೆ ಸಲ್ಲಿಸಿದವರು. ವಿದ್ಯಾರ್ಥಿ ದಿನಗಳಿಂದಲೂ ಕೂಡ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದವರು. ಯಾವುದೇ ಹಿನ್ನಲೆ ಇಲ್ಲದೇ ಸ್ವಂತ ಪ್ರತಿಭೆಯಿಂದ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿ, ಅನೇಕ ರೀತಿಯ ಸೇವೆಯನ್ನು ಸಲ್ಲಿಸಿದರು.

ಶ್ರೀನಿವಾಸ ಪ್ರಸಾದ್‌ ಅವರು ನಂಬಿದ್ದ ಸಾಮಾಜಿಕ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ದಲಿತರ ಧ್ವನಿಯಾಗಿ ಸೇವೆ ಮಾಡಿದ್ದಾರೆ. ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲೂ ಕೂಡ ಶೋಷಣೆಗಳ ವಿರುದ್ಧ ಯಾವುದೇ ಸಂಕೋಚ ಇಲ್ಲದೇ ಧ್ವನಿ ಎತ್ತುತ್ತಿದ್ದಂತ ಅಪರೂಪದ ರಾಜಕಾರಣಿ ಪ್ರಸಾದ್‌.

ಯಾವುದೇ ಅಧಿಕಾರದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ ನಂಬಿದಂತ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿದ್ದರು. ಅದನ್ನು ಅನೇಕ ಬಾರಿ ಅವರೇ ಪುನರುಚ್ಚರಿಸುತ್ತಿದ್ದರು.

ಸಕ್ರೀಯ ರಾಜಕಾರಣದಿಂದ ಮುಕ್ತರಾಗ, ಮುಕ್ತವಾದ ಮನಸ್ಸಿನಿಂದ ಇರೇಕು ಎಂಬ ಆಶಯ ಅವರಲ್ಲಿತ್ತು. ಚಿಧಿಯ ಸಂಕಲ್ಪದಂತೆ ಕಳೆದ ತಿಂಗಳು ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸಿದ್ದರು.

ಇದರಿಂದಾಗಿ ಅವರ ಜೀವನದಲ್ಲಿ ಶಾಂತಿ, ನೆಮ್ಮದಿ ಕಲ್ಪಿಸಿದೆ ಎಂದು ಭಾವಿಸಿ, ಭಗವಂತ ಆವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆʼ ಎಂದು ತಿಳಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

56 mins ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

1 hour ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

1 hour ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

1 hour ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

2 hours ago