ಮೈಸೂರು : ಶೋಷಣೆಗಳ ವಿರುದ್ಧ ಯಾವುದೇ ಸಂಕೋಚವಿಲ್ಲದೆ ಧ್ವನಿ ಎತ್ತುತ್ತಿದ್ದ ಪರೂಪದ ರಾಜಕಾರಣಿ ವಿ.ಶ್ರೀನಿವಾಸ ಪ್ರಸಾದ್. ಅವರ ನಿಧನ ವಿಷಾದದ ಸಂಗತಿ ಎಂದು ಸುತ್ತೂರು ಮಠದ ಪೀಠಾಧಿಪತಿಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಶ್ರೀನಿವಾಸ ಪ್ರಸಾದ್ ಅವರ ಅಂತಿಮ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶ್ರೀನಿವಾಸ ಪ್ರಸಾದ್ ಅವರ ಅಗಲಿಕೆ ವಿಷಾದದ ಸಂಗತಿ. ರಾಜಕೀಯ ಕ್ಷೇತ್ರದಲ್ಲಿ ಧೃವತಾರೆಯಾಗಿ ಸೇವೆ ಸಲ್ಲಿಸಿದವರು. ವಿದ್ಯಾರ್ಥಿ ದಿನಗಳಿಂದಲೂ ಕೂಡ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಂಡಿದ್ದವರು. ಯಾವುದೇ ಹಿನ್ನಲೆ ಇಲ್ಲದೇ ಸ್ವಂತ ಪ್ರತಿಭೆಯಿಂದ ರಾಜಕೀಯ ಕ್ಷೇತ್ರವನ್ನು ಪ್ರವೇಶಿಸಿ, ಅನೇಕ ರೀತಿಯ ಸೇವೆಯನ್ನು ಸಲ್ಲಿಸಿದರು.
ಶ್ರೀನಿವಾಸ ಪ್ರಸಾದ್ ಅವರು ನಂಬಿದ್ದ ಸಾಮಾಜಿಕ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ದಲಿತರ ಧ್ವನಿಯಾಗಿ ಸೇವೆ ಮಾಡಿದ್ದಾರೆ. ಕೇಂದ್ರ ಸಚಿವರಾಗಿದ್ದ ಸಂದರ್ಭದಲ್ಲೂ ಕೂಡ ಶೋಷಣೆಗಳ ವಿರುದ್ಧ ಯಾವುದೇ ಸಂಕೋಚ ಇಲ್ಲದೇ ಧ್ವನಿ ಎತ್ತುತ್ತಿದ್ದಂತ ಅಪರೂಪದ ರಾಜಕಾರಣಿ ಪ್ರಸಾದ್.
ಯಾವುದೇ ಅಧಿಕಾರದ ಜೊತೆ ಹೊಂದಾಣಿಕೆ ಮಾಡಿಕೊಳ್ಳದೆ ನಂಬಿದಂತ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿದ್ದರು. ಅದನ್ನು ಅನೇಕ ಬಾರಿ ಅವರೇ ಪುನರುಚ್ಚರಿಸುತ್ತಿದ್ದರು.
ಸಕ್ರೀಯ ರಾಜಕಾರಣದಿಂದ ಮುಕ್ತರಾಗ, ಮುಕ್ತವಾದ ಮನಸ್ಸಿನಿಂದ ಇರೇಕು ಎಂಬ ಆಶಯ ಅವರಲ್ಲಿತ್ತು. ಚಿಧಿಯ ಸಂಕಲ್ಪದಂತೆ ಕಳೆದ ತಿಂಗಳು ರಾಜಕಾರಣದಿಂದ ನಿವೃತ್ತಿಯನ್ನು ಘೋಷಿಸಿದ್ದರು.
ಇದರಿಂದಾಗಿ ಅವರ ಜೀವನದಲ್ಲಿ ಶಾಂತಿ, ನೆಮ್ಮದಿ ಕಲ್ಪಿಸಿದೆ ಎಂದು ಭಾವಿಸಿ, ಭಗವಂತ ಆವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ದುಖಃ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆʼ ಎಂದು ತಿಳಿಸಿದರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…